ಮಂಗಳೂರು: ಹಿರಿಯ ಮೆಸ್ಕಾಂ ಅಧಿಕಾರಿಯೊಬ್ಬರು ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಸಂಜೆ ವೇಳೆ ಸಂಭವಿಸಿದೆ.
ಶಿರ್ವ ಮೆಸ್ಕಾಂ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರೆಹ್ಮಾತ್ ಆತ್ಮಹತ್ಯೆಗೈದವರು. ಮಂಗಳೂರು ನಗರದಿಂದ ಬಸ್ಸಿನಲ್ಲಿ ಬಂದು ಇಳಿದ ರೆಹ್ಮಾತ್ ಅವರು ಸೇತುವೆಯಿಂದ ಕೆಳಗೆ ಹಾರುತ್ತಿರುವುದನ್ನು ವಾಹನ ಸವಾರರು ಕಂಡಿದ್ದಾರೆ.
ಇದೇ ವೇಳೆ ನದಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ದೋಣಿಯವರು ಇವರಿಗಾಗಿ ಒಂದು ತಾಸಿನ ವರೆಗೂ ಕಾರ್ಯಾಚರಣೆ ನಡೆಸಿ ಮೃತ ದೇಹವನ್ನು ಮೇಲಕ್ಕೆ ಎತ್ತಿದ್ದಾರೆ. ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯಿಂದ ಕೆಲ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಯಿತು. ಸಂಚಾರಿ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.