ಮಂಗಳೂರು: ತುಳುನಾಡಿನ ಜಾನಪದ ಕ್ರೀಡೆ ಕಂಬಳಕ್ಕೆ ನ್ಯಾಯ ಸಿಗುವವರೆಗೂ ಹೋರಾಟವನ್ನು ನಿಲ್ಲಿಸಬೇಡಿ ಎಂದು ಎಂದು ರಾಜ್ಯಪಾಲ ವಜುಭಾಯಿ ವಾಲಾ ಹೇಳಿದ್ದಾರೆ.ತುಳುಕೂಟ ಬೆಂಗಳೂರು ನಗರದಲ್ಲಿ ಆಯೋಜಿಸಿದ್ದ ತುಳುನಾಡ ಉತ್ಸವ ಮತ್ತು ತುಳು ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಕಂಬಳಕ್ಕೆ ಸಾಂವಿಧಾನಿಕ ಮಾನ್ಯತೆ ಸಿಗಬೇಕೆನ್ನುವ ಬೇಡಿಕೆ ನ್ಯಾಯಸಮ್ಮತವಾಗಿದೆ.
ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲಿಸಬೇಡಿ ಎಂದು ಹೇಳಿದ್ದಾರೆ. ಚುನಾವಣೆ ಹತ್ತಿರ ಬರುತ್ತಿದೆ. ಯಾವುದೇ ಸರ್ಕಾರಗಳು ಇರಲಿ ಅಥವಾ ಸರ್ಕಾರಗಳು ಬದಲಾಗಲಿ. ಇದು ನಿಮಗೆ ಒಳ್ಳೆಯ ಅವಕಾಶ. ಇದನ್ನು ಕಳೆದುಕೊಳ್ಳಬೇಡಿ. ರಾಜಕಾರಣಿಗಳು ನಿಮ್ಮ ಬೇಡಿಕೆಗೆ ಈಗ ಹೆಚ್ಚು ಸ್ಪಂದಿಸುತ್ತಾರೆ. ನಿಮ್ಮ ಬೇಡಿಕೆಯನ್ನೂ ಈಡೇರಿಸಿಕೊಳ್ಳಿ ಎಂದು ಸಲಹೆ ನೀಡಿದರು.