Sunday 11th, May 2025
canara news

ಅಕ್ರಮ ಕಸಾಯಿಖಾನೆಗೆ ದಾಳಿ : ಓರ್ವನ ಬಂಧನ

Published On : 19 Dec 2017   |  Reported By : canaranews network


ಮಂಗಳೂರು:ಬಂಟ್ವಾಳ ತಾಲೂಕಿನ ಪುದು ಗ್ರಾಮದ ಮಾರಿಪಳ್ಳದಲ್ಲಿ ಕಾರ್ಯಾಚರಿಸುತ್ತಿದ್ದ ಅಕ್ರಮ ಕಸಾಯಿಖಾನೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಸೋಮವಾರ ಸಂಜೆ ದಾಳಿ ನಡೆಸಿದ ಘಟನೆ ನಡೆದಿದ್ದು, ಈ ಸಂಬಂಧ ಓರ್ವನನ್ನು ಬಂಧಿಸಲಾಗಿದೆ. ಮಾರಿಪಳ್ಳ ನಿವಾಸಿ ಬಶೀರ್(45) ಬಂಧಿತ ಆರೋಪಿ.ದಾಳಿಯ ಸಂದರ್ಭ ಸ್ಥಳದಲ್ಲಿದ್ದ ಸುಮಾರು 72 ಕೆ.ಜಿ.ಯಷ್ಟು ದನದ ಮಾಂಸ ಹಾಗೂ ಇನ್ನಿತರ ಸಲಕರಣೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿ ಕಳೆದ ಹಲವು ಸಮಯಗಳಿಂದ ತನ್ನ ಮನೆ ಸಮೀಪವೇ ಅಕ್ರಮವಾಗಿ ಕಸಾಯಿಖಾನೆಯನ್ನು ನಡೆಸುತ್ತಿದ್ದ ಎನ್ನಲಾಗಿದೆ.ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಎಸ್.ಐ.ಪ್ರಸನ್ನ ಮತ್ತವರ ಸಿಬ್ಬಂದಿಗಳು ದಾಳಿ ಕಾರ್ಯಾಚರಣೆ ನಡೆಸಿದ್ದಾರೆ.ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here