ಮಂಗಳೂರು: ಲಕ್ಷದ್ವೀಪಕ್ಕೆ ತೆರಳಲೆಂದು ಸೋಮವಾರ ರಾತ್ರಿ ಮಂಗಳೂರಿನಲ್ಲಿ ತಂಗಿದ್ದ ಪ್ರಧಾನಿ ನರೇಂದ್ರ ಮೋದಿ, ಇಂದು ಬೆಳಗ್ಗೆ (ಮಂಗಳವಾರ) ಕರಾವಳಿಯ ತಿಂಡಿ ರುಚಿ ಸವಿದರು.ಇಂದು ಮುಂಜಾನೆ 3 ಗಂಟೆಗೆ ಎದ್ದು ಯೋಗಭ್ಯಾಸ ಮಾಡಿ ಬಳಿಕ ನೀರುದೋಸೆ,ಮೂಡೆ, ಅವಲಕ್ಕಿ ಉಪ್ಪಿಟ್ಟು ಸವಿದರು.
ಮೂಡೆ ಬಗ್ಗೆ ವಿಚಾರಿಸಿ ಅದರ ರುಚಿಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಮೋದಿ 2 ಬಾರಿ ಮೂಡೆ ಹಾಕಿಸಿಕೊಂಡು ಚಪ್ಪರಿಸಿದರು. ನಂತರ ತಿಂಡಿ ಬಡಿಸಿದವರಿಗೆ ಮೋದಿ ಪ್ರಶಂಸಿದರು.ಇನ್ನು ನಂತರ ತಮಗೆ ಮುಂಜಾನೆಯ ಉಪಹಾರ ನೀಡಿದ ಮಂಗಳೂರಿನ ಓಷಿಯನ್ ಪರ್ಲ್ ಹೋಟೆಲ್ ಸಿಬ್ಬಂದಿ ಜೊತೆ ಪೋಟೋ ತೆಗಿಸಿಕೊಂಡು ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾಯುಪಡೆಯ ವಿಮಾನದ ಮೂಲಕ ಲಕ್ಷದ್ವೀಪಕ್ಕೆ ಪ್ರಯಾಣ ಬೆಳೆಸಿದ್ದಾರೆ.