Wednesday 1st, May 2024
canara news

ಆಳ್ವಾಸ್ ನಲ್ಲಿ ನಾಲ್ಕನೇ ಬಾರಿಯ ಸಿ.ಎನ್.ಸಿ. ತಾಂತ್ರಿಕ ಕಾರ್ಯಾಗಾರ

Published On : 21 Dec 2017   |  Reported By : Gurudatt Somayaji


ಈ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಯಾಂತ್ರಿಕ ವಿಭಾಗದ ಮುಖ್ಯಸ್ಥರಾದ ಪ್ರೊ. ಕೆ ವಿ ಸುರೇಶ್ ರವರು ಕಳೆದ ಬಾರಿಯ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಈ ತರಬೇತಿಯು ಹೇಗೆ ಉದ್ಯೋಗಾವಕಾಶ ಒದಗಿಸಿದೆ ಏಂದು ತಿಳಿಸಿದರು. ಈ ಕಾರ್ಯಾಗಾರದಲ್ಲಿ ಪ್ರೊ. ಹೇಮಂತ್ ಸುವರ್ಣ, ಪ್ರೊ. ಪ್ರಮೋದ್ ಕುಮಾರ್ ಎನ್. ಹಾಗೂ ಪ್ರೊ. ಶ್ರೀನಿವಾಸರವರು ಉತ್ತಮವಾಗಿ ತರಬೇತಿಯನ್ನು ಕೊಟ್ಟಿರುತ್ತಾರೆ ಎಂದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಪೀಟರ್ ಫೆರ್ನಾಂಡಿಸ್ ಅವರು ಮಾತನಾಡಿ ವಿದ್ಯಾರ್ಥಿಗಳು ಈ ಸ್ಪರ್ಧಾತ್ಮಕ ಯುಗದಲ್ಲಿ ತಮ್ಮ ಜ್ಞಾನವನ್ನು ವಿಸ್ತರಿಸಬೇಕು ಎಂದು ತಿಳಿಸಿದರು. "ಕೈಗಾರಿಕೆಗಳಲ್ಲಿ ಮುಂದಿನ ದಿನಗಳಲ್ಲಿ ತಂತ್ರಜ್ಞಾನ ಅಭಿವೃದ್ಧಿ ಹೊಂದಿದಂತೆ ಸಿ.ಎನ್.ಸಿ. ಆಪರೇಟರಗಳ ಅವಶ್ಯಕತೆ ಹೆಚ್ಚಲಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಮ್ಮ ಪಠ್ಯಕ್ರಮದ ಹೊರತಾಗಿ ಸಿ.ಎನ್.ಸಿ.ಯೇ ಮೊದಲಾದ ಸಹ ಪಠ್ಯ ವಿಷಯಗಳಲ್ಲೂ ತಮ್ಮ ಜ್ಞಾನವನ್ನು ವಿಸ್ತರಿಸಬೇಕು. ಈ ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೋಸ್ಕರ ವಸತಿ ವ್ಯವಸ್ಥೆಯ ಜೊತೆಗೆ ಕನಿಷ್ಠ ಶುಲ್ಕದೊಂದಿಗೆ ಇಂತಹ ತರಬೇತಿಯನ್ನು ನೀಡಲಾಗುತ್ತದೆ" ಎಂದು ತಿಳಿಸಿದರು.

ಸಿವಿಲ್ ಮತ್ತು ಮೆಕ್ಯಾನಿಕಲ್ ಶೈಕ್ಷಣಿಕ ವಿಭಾಗಗಳ ಡೀನ್ ಪ್ರೊ. ದುರ್ಗಾಪ್ರಸಾದ್ ಬಾಳಿಗಾರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಪ್ರೊ. ಹೇಮಂತ್ ಸುವರ್ಣ ವಂದನಾರ್ಪಣೆಯನ್ನು ನೆರವೇರಿಸಿದರು.




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here