`ರಾಷ್ಟ್ರೀಯ ಕನ್ನಡ ರತ್ನ ಪ್ರಶಸ್ತಿ'ಗೆ ಹರೇಕಲ ಹಜ್ಜಬ್ಬ ಆಯ್ಕೆ
ಮುಂಬಯಿ, ಡಿ.24: ಚೆಂಬೂರು ಕರ್ನಾಟಕ ಪೂರ್ವ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಮತ್ತು ಕಿರಿಯ ಮಹಾ ವಿದ್ಯಾಲಯ ಮತ್ತು ಕಾನೂನು ಕಾಲೇಜು ನಡೆಸುತ್ತಾ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳನ್ನಾಗಿ ಮುನ್ನಡೆಸುತ್ತಿರುವ ಚೆಂಬೂರು ಕರ್ನಾಟಕ ಸಂಘ ಇದರ ವಾರ್ಷಿಕ ಸಾಹಿತ್ಯ-ಸಂಸ್ಕೃತಿ, ಸಮ್ಮಾನ ಸಂಭ್ರಮ `ಸಾಹಿತ್ಯ ಸಹವಾಸ 2017-18' ಕಾರ್ಯಕ್ರಮವು ಇದೇ ಬರುವ ಶನಿವಾರ (ಡಿ.24) ಸಂಜೆ ಚೆಂಬೂರು ಘಾಟ್ಲಾ ಅಲ್ಲಿನ ಸಂಸ್ಥೆಯ ಸಂಕುಲದಲ್ಲಿ ಸಂಘದ ಅಧ್ಯಕ್ಷ ನ್ಯಾಯವಾದಿ ಹೆಚ್.ಕೆ ಸುಧಾಕರ ಅರಾಟೆ ಅಧ್ಯಕ್ಷತೆಯಲ್ಲಿ ನಡೆಯಲಿದ್ದು ಮುಂಬಯಿ ಕ್ರೈಂ ವಿಭಾಗದ ಹೆಚ್ಚುವರಿ ಪೋಲಿಸ್ ಆಯುಕ್ತ ಕೆ.ಎಂ.ಎಂ ಪ್ರಸನ್ನ (ಐಪಿಎಸ್) ಅವರು ಸಮಾರಂಭದಲ್ಲಿ ಪ್ರದಾನ ಅಭ್ಯಾಗತರಾಗಿ ಆಗಮಿಸಿ ಸಾಹಿತ್ಯ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.