ಮಂಗಳೂರು: ಡಿಸೆಂಬರ್ 22ರಿಂದ 31ರವರೆಗೆ ಮಂಗಳೂರಿನಲ್ಲಿ ನಡೆಯುವ 'ಕರಾವಳಿ ಉತ್ಸವ 2017' ಈ ಉತ್ಸವವನ್ನು ಬಹುಭಾಷಾ ನಟ ಪ್ರಕಾಶ್ ರೈ ಉದ್ಘಾಟಿಸಲಿದ್ದಾರೆ.
ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಸ್ಪಷ್ಟಪಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ 'ಕರಾವಳಿ ಉತ್ಸವ ಯಶಸ್ವಿಯಾಗಿ ನಡೆಯುವಂತೆ ಸಕಲ ತಯಾರಿಗಳೂ ನಡೆಯುತ್ತಿವೆ.
ಕರಾವಳಿ ಉತ್ಸವದ ಅಂಗವಾಗಿ ಹತ್ತು ದಿನಗಳ ಕಾಲ ಕರಾವಳಿ ಉತ್ಸವ ಮೈದಾನ ಮತ್ತು ಕದ್ರಿ ಉದ್ಯಾನದ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಡಿಸೆಂಬರ್ 29ರಿಂದ 31ರವರೆಗೆ ಪಣಂಬೂರು ಕಡಲ ತೀರದಲ್ಲಿ 'ಬೀಚ್ ಉತ್ಸವ' ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.