ಮಂಗಳೂರು: ಬೆಂಗಳೂರು-ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ರಸ್ತೆಯಲ್ಲಿ ಎರಡನೇ ಹಂತದ ಕಾಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಜನವರಿ 2ನೇ ವಾರದಿಂದ ಐದು ತಿಂಗಳ ಕಾಲ ಈ ಮಾರ್ಗದಲ್ಲಿ ಸಂಪೂರ್ಣವಾಗಿ ವಾಹನ ಸಂಚಾರ ನಿಷೇಧಿಸಲಾಗಿದೆ.
ಶಿರಾಡಿ ಘಾಟಿಯಲ್ಲಿ ಬಾಕಿ ಉಳಿದಿರುವ 12.38 ಕಿ.ಮೀ. ಉದ್ದದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಆರಂಭಕ್ಕೆ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು, ಜನವರಿ ಎರಡನೇ ವಾರದಿಂದ ಐದು ತಿಂಗಳ ಕಾಲ ಈ ರಸ್ತೆಯನ್ನು ಸಂಪೂರ್ಣವಾಗಿ ಮುಚ್ಚಲು ಲೋಕೋಪಯೋಗಿ ಇಲಾಖೆ ನಿರ್ಧರಿಸಿದೆ.ಕಾಮಗಾರಿ ಕಾರಣದಿಂದ ಬೆಂಗಳೂರು-ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸುವ ಸಂಬಂಧ ಮುಂದಿನ ವಾರ ಆದೇಶ ಹೊರಬೀಳುವ ಸಾಧ್ಯತೆ ಇದೆ.