Sunday 11th, May 2025
canara news

ಬಂಟ್ವಾಳದ ಕಲ್ಲಡ್ಕದಲ್ಲಿ ಕೊಲೆ ಯತ್ನ, ಜಲೀಲ್ ಕರೋಪಾಡಿ ಕೊಲೆಗೆ ಪ್ರತೀಕಾರದ ಶಂಕೆ

Published On : 27 Dec 2017   |  Reported By : Canaranews network


ಮಂಗಳೂರು: ದ.ಕ.ಜಿಲ್ಲೆಯ ಬಂಟ್ವಾಳದ ಜಲೀಲ್ ಕರೋಪಾಡಿಯ ಕೊಲೆ ಆರೋಪಿಯಾಗಿರುವ ಕೇಶವ ಮೇಲೆ ದುಷ್ಕರ್ಮಿಗಳು ಡಿ 26 ರ ಮಂಗಳವಾರ ಸಂಜೆ ಕಲ್ಲಡ್ಕದಲ್ಲಿ ಕೊಲೆಯತ್ನ ನಡೆಸಿದ್ದಾರೆ. ಬೈಕ್ ನಲ್ಲಿ ಹೆಲ್ಮೆಟ್ ಧರಿಸಿ ಬಂದ ಇಬ್ಬರು ಅಪರಿಚಿತರು ಏಕಾಏಕಿ ಕೇಶವ ಅವರ ಮೇಲೆ ಚೂರಿ ಇರಿದ್ದಿದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಕೇಶವ ಪ್ರಾಣಪಾಯದಿಂದ ಪಾರಾಗಿದ್ದಾನೆ .

ಆದರೆ ಘಟನೆಯಿಂದ ಕಲ್ಲಡ್ಕ ಪೇಟೆಯಲ್ಲಿ ಭಯದ ವಾತವರಣ ನಿರ್ಮಾಣವಾಗಿತ್ತು. ಕೊಲೆ ಯತ್ನದ ಹಿನ್ನೆಲೆಯಲ್ಲಿ ಕಲ್ಲಡ್ಕದಲ್ಲಿ ಬಂದ್ ವಾತಾವರಣ ಇದೆ. ಕಲ್ಲಡ್ಕದಾದಂತ್ಯ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಜಲೀಲ್ ಕರೋಪಾಡಿ ಕೊಲೆಗೆ ಪ್ರತೀಕಾರವಾಗಿ ಕೊಲೆಗೆ ಯತ್ನ ನಡೆಸಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. 2017ರ ಏಪ್ರಿಲ್ 20ರಂದು ಜಲೀಲ್ ಕರೋಪಾಡಿ ಕೊಲೆಯು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ನಡೆದಿತ್ತು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here