Friday 26th, April 2024
canara news

ಪೂಜಾರಿಯವರಿಗೆ ನಾನು ಬೈದಿದ್ದರೆ ದೇವರು ನೋಡಿಕೊಳ್ಳಲಿ.. ಅವರಿಗೆ ನಾನು ಏನೂ ಬೈದಿಲ್ಲ – ರೈ

Published On : 31 Dec 2017   |  Reported By : Canaranews network


ಮಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿರುವ ಬಿ.ಜನಾರ್ದನ ಪೂಜಾರಿ ಅವರ ಮೇಲೆ ನನಗೆ ಅಪಾರ ಗೌರವವಿದೆ. ಪೂಜಾರಿಯವರ ಕುರಿತು ನಾನು ಏನೂ ಮಾತನಾಡಿಲ್ಲ ಎಂದು ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.ಬಿ.ಸಿ.ರೋಡಿನ ಕಾಂಗ್ರೆಸ್ ಕಚೇರಿ ಬಳಿ ಮಾತನಾಡಿದ ಅವರು, ಪೂಜಾರಿ ಅವರ ಮೇಲೆ ಅಪಾರವಾದ ಗೌರವ ಇಟ್ಟುಕೊಂಡಿದ್ದೇನೆ.

ಕೆಲವು ದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ಪೂಜಾರಿಯವರನ್ನು ಭೇಟಿಯಾಗಿ ಅವರ ಜೊತೆ ಮಾತನಾಡಿದ್ದೇನೆ. ಪೂಜಾರಿಯವರ ವಿರುದ್ಧವಾಗಿ ನಾನು ಏನೂ ಮಾತನಾಡಿಲ್ಲ. ಕೆಲವರಿಂದ ಅವರನ್ನು ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು.ನಾನು ಪೂಜಾರಿಯವರನ್ನು ಬೈದಿರುವ ವಿಡಿಯೋ ಏಲ್ಲಿದೆ..? ಅವರಿಗೆ ನಾನು ಬೈದಿಲ್ಲ. ತಪ್ಪಾಗಿ ಅವರು ಅರ್ಥ ಮಾಡಿಕೊಂಡರೆ ದೇವರು ನೋಡಿಕೊಳ್ಳಲಿ. ಇವೆಲ್ಲಾ ಅವರ ಮತ್ತು ನನ್ನ ಮಧ್ಯೆ ಭಿನ್ನಾಭಿಪ್ರಾಯ ಸೃಷ್ಟಿಸಲು ಮಾಡಿದ ಹುನ್ನಾರ ಎಂದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here