ದ.ಕ ಜಿಲ್ಲಾ ಬಂಟ್ವಾಳದ ಸಾಲೆತ್ತೂರು ಇಲ್ಲಿನ ಸರಕಾರಿ ಪ್ರೌಢಶಾಲೆಯ ಮಾ| ತರುಣ್ ಯುವ ಸಂಸತ್ತ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ಸಂಸದೀಯ ವ್ಯವಹಾರಗಳ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ದ.ಕ ಇವರ ಸಹಯೋಗದೊಂದಿಗೆ ನಡೆದ ಜಿಲ್ಲಾ ಮಟ್ಟದ ಯುವ ಸಂಸತ್ತ್ ಸ್ಪರ್ಧೆಯಲ್ಲಿ ಸಾಲೆತ್ತೂರು ಪ್ರೌಢಶಾಲೆಯ 10ನೇ ತರಗತಿ ವಿದ್ಯಾಥಿರ್ü ಮಾ| ತರುಣ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಇವರಿಗೆ ಶಿಕ್ಷಕ ವಿನಾಯಕ ನಾಯಕ ಮಾರ್ಗದರ್ಶನ ಮಾಡಿದ್ದು ಎಸ್.ಡಿ.ಎಂ.ಸಿ ಕಾರ್ಯಧ್ಯಕ್ಷ ಮಾಧವ ಮಾವೆ ಹಾಗೂ ಸದಸ್ಯರು, ಮುಖ್ಯೋಪಾಧ್ಯಾಯ ರೇವಣ್ಣ, ಶಿಕ್ಷಕ, ಶಿಕ್ಷಕೇತರ ವೃಂದ, ವಿದ್ಯಾಥಿರ್üವೃಂದ ಅಭಿನಂದನೆ ಸಲ್ಲಿಸಿದ್ದಾರೆ.