Monday 12th, May 2025
canara news

ಪೂಜಾರಿಯವರಿಗೆ ನಾನು ಅವಹೇಳನ ಮಾಡಿಲ್ಲ, ಸತ್ಯ ಪ್ರಮಾಣಕ್ಕೆ ಸಿದ್ಧನಿದ್ದೇನೆ - ರೈ ಕಣ್ಣೀರು

Published On : 03 Jan 2018   |  Reported By : canaranews network


ಮಂಗಳೂರು: ಬಿ.ಸಿ.ರೋಡ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಚಿವ ರಮಾನಾಥ ರೈ ಭಾವುಕರಾಗಿ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು.ಮಂಗಳೂರಿನಲ್ಲಿ ಕಳೆದ ವಾರ ಸಾರ್ವಜನಿಕ ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಜನಾರ್ದನ ಪೂಜಾರಿ ರೈ ಮಾತುಗಳನ್ನು ನೆನೆದು ಕಣ್ಣೀರು ಹಾಕಿದ್ದರು.

ಇದೀಗ ಸಚಿವ ರಮಾನಾಥ ರೈ, ಪೂಜಾರಿ ಮತ್ತು ನನ್ನ ನಡುವೆ ಕೆಲವರು ಸಂಬಂಧ ಹಾಳು ಮಾಡುತ್ತಿದ್ದಾರೆ ಎಂದು ಹೇಳುತ್ತಾ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ.ಪೂಜಾರಿ ಬಗ್ಗೆ ತನಗೆ ಗೌರವ ಇದೆ. ಈ ಹಿಂದೆ ಲೋಕಸಭಾ ಚುನಾವಣೆ ಸಂದರ್ಭ ಹೈಕಮಾಂಡ್ ಮಂಗಳೂರು ಕ್ಷೇತ್ರದಿಂದ ಎರಡು ಹೆಸರು ಕೇಳಿದರೂ ಜನಾರ್ದನ ಪೂಜಾರಿ ಅವರ ಒಂದೇ ಒಂದು ಹೆಸರು ಶಿಫಾರಸು ಮಾಡಿದವ ನಾನು. ಪೂಜಾರಿ ಅವರನ್ನು ಅವಹೇಳನ ಮಾಡಿದ ಬಗ್ಗೆ ಸಾಕ್ಷಿ ಇದ್ದರೆ ಹೇಳಲಿ. ಸತ್ಯಪ್ರಮಾಣಕ್ಕೆ ನನ್ನನ್ನು ಕರೆದರೆ ನಾನು ಅದಕ್ಕೆ ಸಿದ್ಧನಿದ್ದೇನೆ ಎಂದು ಹೇಳಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here