Monday 12th, May 2025
canara news

ಸಾಮಾಜಿಕ ಜಾಲತಾಣದಲ್ಲಿ ಲವ್ ಜಿಹಾದ್ ವಿರುದ್ಧ ನೈತಿಕ ಪೊಲೀಸರಿಂದ ಬೆದರಿಕೆ ತಂತ್ರ

Published On : 04 Jan 2018   |  Reported By : canaranews network


ಮಂಗಳೂರು: ಮಂಗಳೂರಿನಲ್ಲಿ ನೈತಿಕ ಪೊಲೀಸರ ಬೆದರಿಕೆ ತಂತ್ರದ ಇನ್ನೊಂದು ಮುಖ ಬಹಿರಂಗವಾಗಿದೆ.ವೀರ ಕೇಸರಿ ಎಂಬ ಫೇಸ್ ಬುಕ್ ಪೇಜ್ ನಲ್ಲಿ ನೈತಿಕ ಪೊಲೀಸರು ಮಂಗಳೂರಿನ ಹೊರವಲಯದ ಮೂಡಬಿದಿರೆ ಕಾಲೇಜಿನ ವಿದ್ಯಾರ್ಥಿನಿಯರಿಗೆ ಬೆದರಿಕೆ ಹಾಕಿದ್ದು ಬುದ್ದಿ ಹೇಳಿ ಎಚ್ಚರಿಕೆ ನೀಡಿದ್ದಾಯಿತು.

ಇನ್ನು ಮುಂದುವರಿದರೆ ಧರ್ಮದೇಟು ಗ್ಯಾರಂಟಿ ಎಂದು ಎಂದು ಬೆದರಿಕೆ ಹಾಕಿದ್ದಾರೆ. ಅಲ್ಲದೆ ಅನ್ಯ ಧರ್ಮದ ಯುವಕರೊಂದಿಗೆ ಕಂಡು ಬಂದಲ್ಲಿ ಧರ್ಮದೇಟು ನೀಡ್ತಿವಿ ಎಂದು ನೈತಿಕ ಪೊಲೀಸರು ಫೇಸ್ ಬುಕ್ ಪೇಜ್ ನಲ್ಲಿ ಎಚ್ಚರಿಕೆ ನೀಡಿದ್ದಾರೆ. ಜ 2 ರ ಮಂಗಳವಾರವಷ್ಟೇ ಪಿಲಿಕುಳದ ವಾಟರ್ ಪಾರ್ಕ್ ನಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿತ್ತು. ಭಿನ್ನ ಕೋಮಿನ ಕಾಲೇಜು ವಿದ್ಯಾರ್ಥಿಗಳು ಜೊತೆಗೆ ಕಾಣಿಸಿಕೊಂಡಿದ್ದಕ್ಕಾಗಿ ನೈತಿಕ ಪೊಲೀಸರು ಹಲ್ಲೆ ನಡೆಸಿದ್ದರು. ಇದೀಗ ಇದರ ಬೆನ್ನಲ್ಲೇ ಫೇಸ್ ಬುಕ್ ನಲ್ಲಿ ಕಿಡಿಗೇಡಿಗಳು ಈ ರೀತಿಯಲ್ಲಿ ವಿದ್ಯಾರ್ಥಿನಿಯರಿಗೆ ಬೆದರಿಕೆ ಹಾಕಿದ್ದಾರೆ.ಈ ಬಗ್ಗೆ ಚರ್ಚೆ ಆರಂಭಗೊಂಡಿದೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here