Tuesday 5th, August 2025
canara news

ಜನವರಿ 15ರಿಂದ ಶಿರಾಡಿ ಘಾಟ್ ಬಂದ್

Published On : 04 Jan 2018   |  Reported By : canaranews network


ಮಂಗಳೂರು: ಬಾಕಿ ಉಳಿದಿರುವ ಅಭಿವೃದ್ಧಿ ಕಾಮಗಾರಿಗಾಗಿ ಜನವರಿ 15ರಿಂದ ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್ ಮಾಡಲು ನಿರ್ಧರಿಸಲಾಗಿದೆ. ಮಂಗಳೂರು-ಬೆಂಗಳೂರು ನಗರಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರ ಹಾಸನ ಜಿಲ್ಲೆಯ ಕೆಂಪುಹೊಳೆ ಗೆಸ್ಟ್ ಹೌಸ್ ನಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಡ್ಡಹೊಳೆವರೆಗಿನ 13 ಕಿಲೋಮೀಟರ್ ರಸ್ತೆ ಅಭಿವೃದ್ಧಿಗೊಳಿಸಬೇಕಾಗಿದೆ.ಈ ಕಾರಣಕ್ಕಾಗಿ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಲು ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಧರಿಸಿದೆ.

ಕಾಮಗಾರಿ ವೇಳೆ ಸಣ್ಣ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂಬ ಬೇಡಿಕೆ ಸಾರ್ವಜನಿಕರಿಂದ ಕೇಳಿ ಬಂದಿತ್ತು. ಆದರೆ ಇದು ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿ ಎಸ್. ಶಶಿಕಾಂತ್ ಸೆಂಥಿಲ್ ಹೇಳಿದ್ದಾರೆ.ಇದೇ ಜನವರಿ 6ರಂದು ಹಾಸನ ಮತ್ತು ದಕ್ಷಿಣ ಕನ್ನಡ ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಭೆಯನ್ನು ಪಿಡಬ್ಲ್ಯೂಡಿ ಹೆಚ್ಚುವರಿ ಮುಖ್ಯ ಕಾರ್ದರ್ಶಿಗಳು ಕರೆದಿದ್ದು ಈ ಸಭೆಯಲ್ಲಿ ಔಪಚಾರಿಕವಾಗಿ ಘಾಟಿ ರಸ್ತೆ ಮುಚ್ಚುವ ದಿನವನ್ನು ನಿಗದಿಪಡಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here