ಜ.6: ಬಿಲ್ಲವ ಭವನದಲ್ಲಿ ಪೂರ್ವಭಾವಿ ಸಮಾಲೋಚನಾ ಸಭೆ
ಮುಂಬಯಿ, ಜ.04: ಕನ್ನಡ ಸಂಘ ಸಾಂತಾಕ್ರೂಜ್ (ರಿ). ಸಂಸ್ಥೆಯು ವಜ್ರಮಹೋತ್ಸವ ಸಂಭ್ರಮದಲ್ಲಿದ್ದು ಈ ಉತ್ಸವವನ್ನು ಅರ್ಥಪೂರ್ಣ ಮತ್ತು ಅದ್ದೂರಿಯಾಗಿ ಆಚರಿಸುವ ಸಿದ್ಧತೆಯಲ್ಲಿದೆ.
ಆ ಪ್ರಯುಕ್ತ ಇದೇ ಜ.06ನೇ ಶನಿವಾರ ಸಂಜೆ 4.00 ಗಂಟೆಗೆ ಸಾಂತಾಕ್ರೂಜ್ ಪೂರ್ವದ ಬಿಲ್ಲವ ಭವನದ ಕಿರು ಸಭಾಗೃಹದಲ್ಲಿ ಸಂಘದÀ ಅಧ್ಯಕ್ಷ ಎಲ್.ವಿ ಅಮೀನ್ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ಆಯೋಜಿಸಲಾಗಿದೆ.
L V Amin Sujata R Shetty
ವಜ್ರಮಹೋತ್ಸವ ಯಶಸ್ಸಿಗಾಗಿ ನಡೆಯಲಿರುವ ಸಭೆಯಲ್ಲಿ ಉಪ ಸಮಿತಿಗಳ ರಚನೆ, ಸದಸ್ಯರು, ಹಿತೈಷಿಗಳ ಅಭಿಮತಗಳೊಂದಿಗೆ ಸಾಂಸ್ಕೃತಿಕ, ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮಗಳ ಆಯೋಜನೆ ಇತ್ಯಾದಿಗಳ ಬಗ್ಗೆ ಚರ್ಚಿಸಲಾಗುವುದು. ಆ ಪ್ರಯುಕ್ತ ಸಂಘದ ಎಲ್ಲಾ ಪದಾಧಿಕಾರಿಗಳು, ಸರ್ವ ಸದಸ್ಯರು ಪಾಲ್ಗೊಂಡು ಸಭೆಯನ್ನು ಯಶಸ್ವಿ ಗೊಳಿಸುವಂತೆ ಗೌ| ಪ್ರ| ಕಾರ್ಯದರ್ಶಿ ಸುಜಾತಾ ಆರ್.ಶೆಟ್ಟಿ ಪತ್ರಿಕಾ ಹೇಳಿಕೆಯಲ್ಲಿ ವಿನಂತಿಸಿದ್ದಾರೆ.