Friday 19th, April 2024
canara news

ವಜ್ರಮಹೋತ್ಸವ ಸಂಭ್ರಮದಲ್ಲಿ ಕನ್ನಡ ಸಂಘ ಸಾಂತಾಕ್ರೂಜ್

Published On : 04 Jan 2018   |  Reported By : Rons Bantwal


ಜ.6: ಬಿಲ್ಲವ ಭವನದಲ್ಲಿ ಪೂರ್ವಭಾವಿ ಸಮಾಲೋಚನಾ ಸಭೆ

ಮುಂಬಯಿ, ಜ.04: ಕನ್ನಡ ಸಂಘ ಸಾಂತಾಕ್ರೂಜ್ (ರಿ). ಸಂಸ್ಥೆಯು ವಜ್ರಮಹೋತ್ಸವ ಸಂಭ್ರಮದಲ್ಲಿದ್ದು ಈ ಉತ್ಸವವನ್ನು ಅರ್ಥಪೂರ್ಣ ಮತ್ತು ಅದ್ದೂರಿಯಾಗಿ ಆಚರಿಸುವ ಸಿದ್ಧತೆಯಲ್ಲಿದೆ.

ಆ ಪ್ರಯುಕ್ತ ಇದೇ ಜ.06ನೇ ಶನಿವಾರ ಸಂಜೆ 4.00 ಗಂಟೆಗೆ ಸಾಂತಾಕ್ರೂಜ್ ಪೂರ್ವದ ಬಿಲ್ಲವ ಭವನದ ಕಿರು ಸಭಾಗೃಹದಲ್ಲಿ ಸಂಘದÀ ಅಧ್ಯಕ್ಷ ಎಲ್.ವಿ ಅಮೀನ್ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ಆಯೋಜಿಸಲಾಗಿದೆ.

    

L V Amin                           Sujata R Shetty 

ವಜ್ರಮಹೋತ್ಸವ ಯಶಸ್ಸಿಗಾಗಿ ನಡೆಯಲಿರುವ ಸಭೆಯಲ್ಲಿ ಉಪ ಸಮಿತಿಗಳ ರಚನೆ, ಸದಸ್ಯರು, ಹಿತೈಷಿಗಳ ಅಭಿಮತಗಳೊಂದಿಗೆ ಸಾಂಸ್ಕೃತಿಕ, ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮಗಳ ಆಯೋಜನೆ ಇತ್ಯಾದಿಗಳ ಬಗ್ಗೆ ಚರ್ಚಿಸಲಾಗುವುದು. ಆ ಪ್ರಯುಕ್ತ ಸಂಘದ ಎಲ್ಲಾ ಪದಾಧಿಕಾರಿಗಳು, ಸರ್ವ ಸದಸ್ಯರು ಪಾಲ್ಗೊಂಡು ಸಭೆಯನ್ನು ಯಶಸ್ವಿ ಗೊಳಿಸುವಂತೆ ಗೌ| ಪ್ರ| ಕಾರ್ಯದರ್ಶಿ ಸುಜಾತಾ ಆರ್.ಶೆಟ್ಟಿ ಪತ್ರಿಕಾ ಹೇಳಿಕೆಯಲ್ಲಿ ವಿನಂತಿಸಿದ್ದಾರೆ.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here