Wednesday 24th, April 2024
canara news

ರಾಜ್ಯ ಸರಕಾರದಿಂದ ದೀಪಕ್ ರಾವ್ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ

Published On : 05 Jan 2018   |  Reported By : canaranews network


ಮಂಗಳೂರು: ಮಂಗಳೂರಿನ ಕಾಟಿಪಳ್ಳದಲ್ಲಿ ಕೊಲೆಯಾದ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕುಟುಂಬಕ್ಕೆ ರಾಜ್ಯ ಸರಕಾರ ೧೦ ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಕಾಟಿಪಳ್ಳಕ್ಕೆ ಆಗಮಿಸಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಶಶಿಕಾಂತ್ ಸೆಂಥಿಲ್, ಸರ್ಕಾರ ೧೦ ಲಕ್ಷ ರೂಪಾಯಿ ಪರಿಹಾರ ನೀಡಲು ಸೂಚಿಸಿದೆ. ತಕ್ಷಣ ಪರಿಹಾರ ಧನವನ್ನು ನೀಡುವುದಾಗಿ ಹೇಳಿದ್ದರು.ಅಷ್ಟೇ ಅಲ್ಲದೆ ಸರ್ಕಾರದಿಂದ ಮತ್ತಷ್ಟು ಪರಿಹಾರ ಧನಕ್ಕಾಗಿ ಬೇಡಿಕೆ ಇಟ್ಟಿದ್ದೇನೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಇನ್ನೂ ಐದು ಲಕ್ಷ ರೂಪಾಯಿ ಬರಲಿದೆ ಎಂದು ಹೇಳಿದ್ದರು. ಆದರೆ ಜಿಲ್ಲಾಧಿಕಾರಿ ಮಾತಿಗೆ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದರು. 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದರು.

ಇದಲ್ಲದೆ ಬುಧವಾರ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ 50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಒತ್ತಾಯಿಸಿದ್ದರೆ, ಸಿಟಿ ರವಿ 25 ಲಕ್ಷ ರೂಪಾಯಿ ಪರಿಹಾರಕ್ಕೆ ಬೇಡಿಕೆ ಇಟ್ಟಿದ್ದರು.ಇದೀಗ ಸರಕಾರ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಜತೆಗೆ ಮಂಗಳೂರು ಉತ್ತರ ಶಾಸಕ ಮೊಯ್ದೀನ್ ಬಾವಾ ದೀಪಕ್ ರಾವ್ ಕುಟುಂಬಕ್ಕೆ ವೈಯಕ್ತಿಕ ನೆಲೆಯಲ್ಲಿ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಹೇಳಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here