ಮಂಗಳೂರು: ಮಂಗಳೂರಿನ ಕಾಟಿಪಳ್ಳದಲ್ಲಿ ನಡೆದ ದೀಪಕ್ ರಾವ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಪ್ರತಿಕ್ರಿಯಿಸಿದ ರಾಮಲಿಂಗಾ ರೆಡ್ಡಿ, "ದೀಪಕ್ ರಾವ್ ಕೊಲೆ ದುಃಖಕರ ಸಂಗತಿಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ. ಸರ್ಕಾರ ಯಾರ ಪರವು ಇಲ್ಲ ವಿರೋಧವು ಇಲ್ಲ ತಪ್ಪು ಮಾಡಿದರನ್ನು ಶಿಕ್ಷಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.ಪರಿಹಾರದ ಬಗ್ಗೆ ಸಿಎಂ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಜತೆ ಚರ್ಚಿಸಿ ಪರಿಹಾರ ಕೊಡುವುದಾಗಿ ಹೇಳಿದರು. ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಶವಯಾತ್ರೆಗೆ ಪೊಲೀಸರು ಅವಕಾಶ ನೀಡಿಲ್ಲವೆಂದು ಸಮಜಾಯಿಸಿ ನೀಡಿದರು.