Friday 26th, April 2024
canara news

ಬಷೀರ್ ಅಂತಿಮ ದರ್ಶನಕ್ಕೆ ಬಂದ ಕೃಷ್ಣ ಪಾಲೇಮಾರ್ಗೆ ತೀವ್ರ ತರಾಟೆ

Published On : 08 Jan 2018   |  Reported By : canaranews network


ಮಂಗಳೂರು: ದುಷ್ಕರ್ಮಿಗಳಿಂದ ಮಾರಣಾಂತಿಕವಾಗಿ ದಾಳಿಗೆ ಒಳಗಾಗಿ ಸಾವನಪ್ಪಿದ್ದ ಬಶೀರ್ ಅವರ ಅಂತಿಮ ದರ್ಶನಕ್ಕಾಗಿ ಆಗಮಿಸಿದ ಬಿಜೆಪಿ ಮುಖಂಡ, ಮಾಜಿ ಸಚಿವ ಕೃಷ್ಣ ಪಾಲೇಮಾರ್ ಅವರಿಗೆ ಖಾಸಗಿ ಆಸ್ಪತ್ರೆಯ ಶವಾಗಾರದ ಆವರಣದಲ್ಲಿ ಜಮಾಯಿಸಿದ್ದ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿ ದಿಕ್ಕಾರ ಘೋಷಣೆ ಕೂಗಿದ್ದಾರೆ.

ಅಂತಿಮ ದರ್ಶನ ಮಾಡಿ ಹೊರಬರುವವರೆಗೂ ಸುಮ್ಮನಿದ್ದ ಜನ ಪಾಲೆಮಾರ್ ಮಾದ್ಯಮಕ್ಕೆ ಪ್ರತಿಕ್ರಿಯಿಸಲು ಮುಂದಾದಾಗ, ನೀವೆ ಹತ್ಯೆಯ ಹೊಣೆಗಾರರು, ನೀವೆ ಹಣ ಕೊಟ್ಟು ಅಮಾಯಕರನ್ನು ಕೊಲ್ಲಿಸುವುದು ಬಳಿಕ ಶಾಂತಿ ಸಾಮರಸ್ಯ ಎಂದು ಹೇಳಿ ರಾಜಕಾರಣ ಮಾಡಲು ಬರುವುದು ಎಂದು ಅಲ್ಲಿ ಸೇರಿರುವ ಜನ ತರಾಟೆಗೆ ತೆಗೆದುಕೊಂಡರು.

ತಕ್ಷಣ ಎಚ್ಚೆತ್ತ ಪೊಲೀಸರು ಪಾಲೇಮಾರ್ ಅವರನ್ನು ಆಸ್ಪತ್ರೆಯ ವಠಾರದಿಂದ ವಾಪಾಸ್ ತೆರಳುವಂತೆ ಸೂಚಿಸಿದ್ದಾರೆ.ಬಳಿಕ ಭೇಟಿ ಮಾಡಿದ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಸರ್ಕಾರದಿಂದ 10 ಲಕ್ಷ ಪರಿಹಾರಧನ ಘೋಷಣೆ ಮಾಡಿದರು. ಅಲ್ಲದೆ ಜಿಲ್ಲೆಯ ಜನರಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here