Monday 12th, May 2025
canara news

ಹಿಂ.ಜಾ.ವೇ ಜಿಲ್ಲಾಧ್ಯಕ್ಷ ಕಲ್ಲಡ್ಕ ರತ್ನಾಕರ ಶೆಟ್ಟಿ ಗಡೀಪಾರು ಆದೇಶಕ್ಕೆ ಹೈಕೋರ್ಟ್ ತಡೆ

Published On : 10 Jan 2018   |  Reported By : canaranews network


ಮಂಗಳೂರು: ಹಿಂದು ಜಾಗರಣಾ ವೇದಿಕೆ ಜಿಲ್ಲಾಧ್ಯಕ್ಷರಾದ ಕಲ್ಲಡ್ಕ ರತ್ನಾಕರ ಶೆಟ್ಟಿ ಅವರ ಗಡೀಪಾರು ಆದೇಶಕ್ಕೆ ರಾಜ್ಯ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿದೆ ಎಂದು ಹಿಂದು ಜಾಗರಣಾ ವೇದಿಕೆ ತಿಳಿಸಿದೆ .

ಕೆಲದಿನಗಳ ಹಿಂದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಶಿಫಾರಸಿನ ಮೇರೆಗೆ ದ.ಕನ್ನಡ ಜಿಲ್ಲಾಧಿಕಾರಿಯವರು ರತ್ನಾಕರ ಶೆಟ್ಟಿ ಸಹಿತ ಇಬ್ಬರಿಗೆ ಗಡೀಪಾರುಗೊಳಿಸಿ ಆದೇಶಿಸಿತ್ತು.ಈ ಆದೇಶವನ್ನು ಹೈಕೋರ್ಟಿನಲ್ಲಿ ಪ್ರಶ್ನಿಸಲಾಗಿದ್ದು,ಈ ದಾವೆಯ ವಿಚಾರಣೆ ನಡಸಿದ ಕೋಟ್೯ ಜಿಲ್ಲಾಧಿಕಾರಿಯವರ ಆದೇಶಕ್ಕೆ ತಡೆಯಾಜ್ಙೆ ನೀಡಿ ಆದೇಶಿಸಿದೆ.ಹೈಕೋರ್ಟ್ ನಲ್ಲಿ ವಕೀಲರಾದ ಅರುಣಶ್ಯಾಮ ಅವರು ರತ್ನಾಕರ ಶೆಟ್ಟಿ ಪರ ವಾದಿಸಿದ್ದರು, ಹಿಂಜಾವೇ ನೇತೃತ್ವದಲ್ಲಿ ಗಡೀಪಾರಿನ ವಿರುದ್ಧ ಬಂಟ್ವಾಳ ತಹಶೀಲ್ದಾರ್ ಕಚೇರಿ ಮುಂಭಾಗ ಜ.1ರಿಂದ 6ರವರೆಗೆ ನಡೆದ ನಿರಂತರವಾಗಿ ಸತ್ಯಾಗ್ರಹ ನಡೆಸಿತ್ತು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here