Monday 12th, May 2025
canara news

ಮಂಗಳೂರಿನಲ್ಲಿ ಗ್ಯಾಂಗ್ ವಾರ್, ಕುಖ್ಯಾತ ರೌಡಿ ಇಲ್ಯಾಸ್ ಹತ್ಯೆ

Published On : 13 Jan 2018   |  Reported By : Canaranews network


ಮಂಗಳೂರು: ಮಂಗಳೂರು ಹೊರವಲಯದ ಉಳ್ಳಾಲದ ಟಾರ್ಗೆಟ್ ಗ್ರೂಪ್ ನ ನಟೋರಿಯಸ್ ರೌಡಿಯಾಗಿದ್ದ ಇಲ್ಯಾಸ್ ನನ್ನು ಶನಿವಾರದಂದು ಕೊಲೆ ಮಾಡಲಾಗಿದೆ. ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಚೂರಿಯಿಂದ ಇರಿದು ಇಲ್ಯಾಸ್ ನನ್ನು ಕೊಲೆ ಮಾಡಲಾಗಿದೆ.ಕೊಲೆ ಯತ್ನ ಪ್ರಕರಣವೊಂದರಲ್ಲಿ ರೌಡಿ ಇಲ್ಯಾಸ್ (31) ನಿನ್ನೆಯಷ್ಟೇ ಬೇಲ್ ಪಡೆದುಕೊಂಡು ಜೈಲಿನಿಂದ ಹೊರ ಬಂದಿದ್ದ.

ಇಂದು ಮುಂಜಾನೆ ಮಂಗಳೂರಿನ ಜಪ್ಪು ಕುಡ್ಪಾಡಿ ಎಂಬಲ್ಲಿರುವ ಮಸೀದಿ ಎದುರು ಫ್ಲಾಟ್ ನಲ್ಲಿ ಪತ್ನಿಯೊಂದಿಗೆ ಇಲ್ಯಾಸ್ ವಾಸವಾಗಿದ್ದ. ಬೆಳಗ್ಗೆ ದುಷ್ಕರ್ಮಿಗಳಿಬ್ಬರು ಮನೆ ಬಾಗಿಲನ್ನು ಬಡಿದಿದ್ದಾರೆ. ಇಲ್ಯಾಸ್ ಪತ್ನಿ ಬಾಗಿಲು ತೆರೆದಾಗ ಮನೆಯೊಳಗೆ ನುಗ್ಗಿ, ಮಲಗಿದ್ದ ಇಲ್ಯಾಸ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದಾರೆ.ಇಲ್ಯಾಸ್ ಉಳ್ಳಾಲದ ಯುವ ಕಾಂಗ್ರೆಸ್ ಮುಖಂಡನೂ ಆಗಿದ್ದ ಎನ್ನಲಾಗಿದೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here