ಮಂಗಳೂರು: ಮಂಗಳೂರು ಹೊರವಲಯದ ಉಳ್ಳಾಲದ ಟಾರ್ಗೆಟ್ ಗ್ರೂಪ್ ನ ನಟೋರಿಯಸ್ ರೌಡಿಯಾಗಿದ್ದ ಇಲ್ಯಾಸ್ ನನ್ನು ಶನಿವಾರದಂದು ಕೊಲೆ ಮಾಡಲಾಗಿದೆ. ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಚೂರಿಯಿಂದ ಇರಿದು ಇಲ್ಯಾಸ್ ನನ್ನು ಕೊಲೆ ಮಾಡಲಾಗಿದೆ.ಕೊಲೆ ಯತ್ನ ಪ್ರಕರಣವೊಂದರಲ್ಲಿ ರೌಡಿ ಇಲ್ಯಾಸ್ (31) ನಿನ್ನೆಯಷ್ಟೇ ಬೇಲ್ ಪಡೆದುಕೊಂಡು ಜೈಲಿನಿಂದ ಹೊರ ಬಂದಿದ್ದ.
ಇಂದು ಮುಂಜಾನೆ ಮಂಗಳೂರಿನ ಜಪ್ಪು ಕುಡ್ಪಾಡಿ ಎಂಬಲ್ಲಿರುವ ಮಸೀದಿ ಎದುರು ಫ್ಲಾಟ್ ನಲ್ಲಿ ಪತ್ನಿಯೊಂದಿಗೆ ಇಲ್ಯಾಸ್ ವಾಸವಾಗಿದ್ದ. ಬೆಳಗ್ಗೆ ದುಷ್ಕರ್ಮಿಗಳಿಬ್ಬರು ಮನೆ ಬಾಗಿಲನ್ನು ಬಡಿದಿದ್ದಾರೆ. ಇಲ್ಯಾಸ್ ಪತ್ನಿ ಬಾಗಿಲು ತೆರೆದಾಗ ಮನೆಯೊಳಗೆ ನುಗ್ಗಿ, ಮಲಗಿದ್ದ ಇಲ್ಯಾಸ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದಾರೆ.ಇಲ್ಯಾಸ್ ಉಳ್ಳಾಲದ ಯುವ ಕಾಂಗ್ರೆಸ್ ಮುಖಂಡನೂ ಆಗಿದ್ದ ಎನ್ನಲಾಗಿದೆ.