ಶ್ರೀ ಮೋಹನದಾಸ್ ಸ್ವಾಮೀಜಿ ದಿವ್ಯೋಪಸ್ಥಿತಿಯಲ್ಲಿ ಸಮಲೋಚನಾ ಸಭೆ
ಮುಂಬಯಿ, ಜ.17: ಬಂಟ್ವಾಳ ತಾಲೂಕು ವಿಟ್ಲ ಗ್ರಾಮದ ಮುರುವ ಇಲ್ಲಿನ ಶ್ರೀಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಪ್ರತಿಷ್ಠಾ ವರ್ಧಂತ್ಯುತ್ಸವ ಬರುವ ಫೆ.18 ರಿಂದ ಜ.25ರ ತನಕ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ವೈಭವಗಳೊಂದಿಗೆ ನಡೆಯಲಿದೆ. ಆ ಪ್ರಯುಕ್ತ ಮುಂಬಯಿವಾಸಿ ಭಕ್ತಾಭಿಮಾನಿಗಳ ಪೂರ್ವಸಿದ್ಧತಾ ಸಮಾಲೋಚನಾ ಸಭೆಯನ್ನು ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ್ ಪರಮಹಂಸ ಸ್ವಾಮೀಜಿ ಅವರ ದಿವ್ಯೋಪಸ್ಥಿತಿಯಲ್ಲಿ ಇದೇ ಜ.21ರ ಶನಿವಾರ ಸಂಜೆ 5.00 ಗಂಟೆಗೆÀ ಸಾಂತಾಕ್ರೂಜ್ ಪೂರ್ವದ ಪ್ರಭಾತ್ ಕಾಲೋನಿ ಅಲ್ಲಿನ ಶ್ರೀ ಪೇಜಾವರ ಮಠದ ಸಭಾಗೃಹದಲ್ಲಿ ಆಯೋಜಿಸಲಾಗಿದೆ.
Pejawarashree Veerendra Hegde Manila Swamij
ಶ್ರೀನಿವಾಸ ಕಲ್ಯಾಣೋತ್ಸವ, ಪ್ರತಿಷ್ಠಾ ವರ್ಧಂತ್ಯುತ್ಸವ, ಅಷ್ಟಪವಿತ್ರ ನಾಗಮಂಡಲೋತ್ಸವ, ಭಜನೋತ್ಸವ, ಮಹಿಳಾ ಸಮಾವೇಶ, ನೇಮೋತ್ಸವ ಯಕ್ಷಗಾನ ಇತ್ಯಾದಿ ಕಾರ್ಯಕ್ರಮಗಳು ನಡೆಯಲಿವೆ. ವರ್ಧಂತ್ಯುತ್ಸವದ ಶುಭಾವಸರದಲ್ಲಿ ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾ ಸಂಸ್ಥಾನದ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಧೀಶ, ಪಂಚ ಪರ್ಯಾಯ ಅಲಂಕರಿಸಿದ ಪರಮಪೂಜ್ಯ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರ ಗುರುವಂದನೆ, ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾಗಿದ್ದು ಸ್ವರ್ಣಸಂಭ್ರಮ ಪೂರೈಸಿದ ಶ್ರೀಕ್ಷೇತ್ರ ಧರ್ಮಸ್ಥಳದ ಪಟ್ಟಾಭಿಷಿಕ್ತ (ಖಾವಂದರು) ಪದ್ಮಶ್ರೀ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಅಭಿನಂದನಾ ಸನ್ಮಾನ ನೆರವೇರಿಸಲಾಗುವುದು.
ಎಲ್ಲಾ ಕಾರ್ಯಕ್ರಮಗಳ ಯಶಸ್ಸಿಗಾಗಿ ಸಭೆಯಲ್ಲಿ ಪೂರ್ವಸಿದ್ಧತೆಗಳನ್ನು ನಡೆಸಲಾಗುವುದು. ವಿಶೇಷ ಸಭೆಯಲ್ಲಿ ಶ್ರೀ ಮೋಹನದಾಸ್ ಸ್ವಾಮೀಜಿ ಪಾಲ್ಗೊಂಡು ನೆರೆದ ಸದ್ಭಕ್ತರಿಗೆ ಪ್ರಸಾದ, ಮಂತ್ರಾಕ್ಷತೆ ನೀಡಿ ಹರಸಲಿದ್ದಾರೆ. ಆ ನಿಮಿತ್ತ ಬೃಹನ್ಮುಂಬಯಿ, ಉಪನಗರಗಳು ಸೇರಿದಂತೆ ಮಹಾರಾಷ್ಟ್ರ ರಾಜ್ಯದಾದ್ಯಂತ ನೆಲೆಯಾಗಿರುವ ಭಕ್ತಾಭಿಮಾನಿಗಳು ಈ ಸಭೆಯಲ್ಲಿ ಭಾಗವಹಿಸುವಂತೆ ಶ್ರೀಧಾಮ ಮಾಣಿಲ ಕ್ಷೇತ್ರದ ಪ್ರಬಂಧಕರು ಈ ಮೂಲಕ ವಿನಂತಿಸಿದ್ದಾರೆ.
ಇದೇ ಜ.17 ರಿಂದ ಜ.20ರ ತನಕ ಮುಂಬಯಿ ಭೇಟಿಯಲ್ಲಿರುವರು ಎಂದು ಕ್ಷೇತ್ರದ ವಕ್ತಾರರು ತಿಳಿಸಿದ್ದಾರೆ.
ಶ್ರೀಗಳು ಜ.17ರಂದು ಮುಂಬಯಿ ಮಹಾನಗರಕ್ಕೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.