ಅಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ ಅವಿರೋಧ ಆಯ್ಕೆ
(ಚಿತ್ರ / ವರದಿ : ರೊನಿಡಾ ಮುಂಬಯಿ)
ಮುಂಬಯಿ, ಜ.17: ಜಾಗತಿಕ ಬಂಟರ ಸಂಘದ ಕಾರ್ಯಕಾರಿಣಿ ಸಭೆಯು ಇಂದು ಮಂಗಳೂರು ಅಲ್ಲಿನ ಬಂಟ್ಸ್ ಹಾಸ್ಟೇಲ್ನ ಸಮಾವೇಶ ಸಭಾಗೃಹದಲ್ಲಿ ನಡೆಯಿತು. ಈ ಸಭೆಯಲ್ಲಿ ಪ್ರಸಕ್ತ ಅಧ್ಯಕ್ಷರಾಗಿದ್ದ ಮಾಲಾಡಿ ಅಜಿತ್ ಕುಮಾರ್ ರೈ ಅವರ ರಾಜೀನಾಮೆ ಅಂಗೀಕಾರಗೊಂಡ ಕಾರಣ ತೆರವಾದ ಸ್ಥಾನಕ್ಕೆ ಸದ್ಯ ಉಪಾಧ್ಯಕ್ಷರಾಗಿದ್ದ ಐಕಳ ಹರೀಶ್ ಶೆಟ್ಟಿ ಅವರನ್ನು ಸಭೆಯು ಸರ್ವಾನುಮತದಿಂದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿತು. ನಿರ್ಗಮನಾಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ಅವರು ಐಕಳ ಹರೀಶ್ ಶೆಟ್ಟಿ ಅವರಿಗೆ ಪುಷ್ಪಗುಪ್ಛವನ್ನಿತ್ತು ಅಭಿನಂದಿಸಿದರು.
ನೂತನ ಅಧ್ಯಕ್ಷ ಸ್ಥಾನದ ಅಧಿಕಾರ ವಹಿಸಿಕೊಂಡ ಹರೀಶ್ ಶೆಟ್ಟಿ ಮಾತನಾಡಿ ವಿಶ್ವದ ಸಮಗ್ರ ಬಂಟರ ಸಂಘಗಳನ್ನು ಒಗ್ಗೂಡಿಸಿ, ಆ ಮುಖಾಂತರ ಸಮಾಜದಲ್ಲಿರುವ ಹಿಂದುಳಿದವರ ಏಳಿಗೆಗೆ ಶ್ರಮಿಸುವುದಾಗಿ ಹೇಳಿದರು.
ಸಭೆಯಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ, ಒಕ್ಕೂಟದ ಕಾರ್ಯದರ್ಶಿ ವಿಜಯ್ ಪ್ರಸಾದ್ ಆಳ್ವ, ಜೊತೆ ಕಾರ್ಯದರ್ಶಿ ಇಂದ್ರಾಳಿ ಜಯಕರ್ ಶೆಟ್ಟಿ, ಕೋಶಾಧಿಕಾರಿ ಬಾಲಕೃಷ್ಣ ರೈ ಕೊಲ್ಲಾಡಿ, ಬಂಟರ ಜಾಗತಿಕ ಪ್ರತಿಷ್ಠಾನದ ಅಧ್ಯಕ್ಷ ಸಚ್ಚಿದಾನಂದ ಶೆಟ್ಟಿ, ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್.ಪಯ್ಯಡೆ, ಮಾಜಿ ಅಧ್ಯಕ್ಷರಾದ ಸಿಎ| ಶಂಕರ್ ಬಿ.ಶೆಟ್ಟಿ, ಕರ್ನಿರೆ ವಿಶ್ವನಾಥ್ ಶೆಟ್ಟಿ, ನಗ್ರಿಗುತ್ತು ವಿವೇಕ್ ಶೆಟ್ಟಿ, ರತ್ನಾಕರ ಶೆಟ್ಟಿ ಮುಂಡ್ಕೂರು, ರವೀಂದ್ರನಾಥ ಎಂ.ಭಂಡಾರಿ, ಉಳ್ತೂರು ಮೋಹನದಾಸ್ ಶೆಟ್ಟಿ, ಬೋಂಬೆ ಬಂಟ್ಸ್ ಅಸೋಸಿಯೇಶನ್ನ ಅಧ್ಯಕ್ಷ ನ್ಯಾ| ಸುಭಾಷ್ ಬಿ.ಶೆಟ್ಟಿ, ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ, ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ವಿವೇಕ್ ಶೆಟ್ಟಿ ನಗ್ರಿಗುತ್ತು, ಜಯರಾಮ್ ಸಾಂತ, ನವೀನ್ ಚಂದ್ರ ಶೆಟ್ಟಿ ಪಡುಬಿದ್ರೆ, ರವಿರಾಜ್ ಶೆಟ್ಟಿ ನಿಟ್ಟೆಗುತ್ತು ಮುಂತಾದವರು ಉಪಸ್ಥಿತರಿದ್ದು ಐಕಳ ಹರೀಶ್ ಶೆಟ್ಟಿ ಅವರನ್ನು ಅಭಿನಂದಿಸಿದರು.