Wednesday 1st, May 2024
canara news

ಜ.27: ಕೊಂಕಣಿ ತ್ರಿವೇಣಿ ಕಲಾ ಸಂಗಮ್ ಮುಂಬಯಿ ಸಂಸ್ಥೆಯಿಂದ ಕೊಂಕಣಿ ಉತ್ಸವ

Published On : 21 Jan 2018   |  Reported By : Rons Bantwal


ಶ್ರೀಮದ್ ವಿದ್ಯಾಧಿರಾಜ ತೀರ್ಥರ ಸನ್ಯಾಸ ದೀಕ್ಷಾ ಸುವರ್ಣೋತ್ಸವ-ಗೌರವ ವಂದನೆ
(ಚಿತ್ರ / ವರದಿ : ರೋನ್ಸ್ ಬಂಟ್ವಾಳ್)

ಮುಂಬಯಿ, ಜ.19: ಕೊಂಕಣಿ ತ್ರಿವೇಣಿ ಕಲಾ ಸಂಗಮ್ ಮುಂಬಯಿ ಸಂಸ್ಥೆಯು ಇದೇ ಜ.27ರ ಶನಿವಾರ ಸಂಜೆ ದಾದರ್ ಪೂರ್ವದ ಸ್ವಾಮಿ ನಾರಾಯಣ ಮಂದಿರದ ಯೋಗಿ ಸಭಾಗೃಹದಲ್ಲಿ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಮಠಾಧೀಶ ಪೂಜ್ಯ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ್ ವಡೆಯರ್ ಸ್ವಾಮೀಜಿ ಹಾಗೂ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರ ದಿವ್ಯೋಪಸ್ಥಿತಿಯಲ್ಲಿ ಕೊಂಕಣಿ ಉತ್ಸವ 2018 ಸಂಭ್ರಮಿಸಲಿದೆ ಎಂದು ತ್ರಿವೇಣಿ ಸಂಗಮ್‍ನ ಅಧ್ಯಕ್ಷ ಉಲ್ಲಾಸ್ ಡಿ.ಕಾಮತ್ ತಿಳಿಸಿದರು.

ಇಂದಿಲ್ಲಿ ಶುಕ್ರವಾರ ಸಂಜೆ ದಾದರ್ ಪ್ರಭಾದೇವಿ ಅಲ್ಲಿನ ಕೊಹಿನೂರು ಹೊಟೇಲು ಸಭಾಗೃಹದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಉಲ್ಲಾಸ್ ಕಾಮತ್ ಮಾತನಾಡಿ ಶ್ರೀಮದ್ ವಿದ್ಯಾಧಿರಾಜ ತೀರ್ಥರ ಸನ್ಯಾಸ ದೀಕ್ಷಾ ಸುವರ್ಣೋತ್ಸವ ಹಾಗೂ ಗೌರವ ವಂದನೆ ನಡೆಸಲಾಗುವುದು. ಆ ಪ್ರಯುಕ್ತ ಅಂದು ಅಪರಾಹ್ನ 3.00 ಗಂಟೆಗೆ ವಡಲಾ ಅಲ್ಲಿನ ರಾಮಮಂದಿರದಿಂದ ಭವ್ಯ ಶೋಭಾಯಾತ್ರೆ ಮೂಲಕ ಯತಿವರ್ಯರನ್ನು ಸಭಾಂಗಣಕ್ಕೆ ವೇದಘೋಷಗಳೊಂದಿಗೆ ಬರಮಾಡಿ ಕೊಳ್ಳಲಾಗುವುದು. ನಂತರ ಪಾದಪೂಜೆ, ಗೌರವ ವಂದನೆ, ಆಶೀರ್ವಚನ, ಅಶೋಕ್ ಪಟ್ಕಿ ಬಳಗದಿಂದ ಸಂಗೀತ ಸಂಧ್ಯಾ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಗೌರವ ಕಾರ್ಯದರ್ಶಿ ಮುಕುಂದ್ ವೈ. ಕಾಮತ್, ಪ್ರಕಾಶ್ ಭಟ್, ಉಮೇಶ್ ಪೈ, ಕಿರಣ್ ಕಾಮತ್ ಮತ್ತು ಸಚಿನ್ ಕಾಮತ್ ಉಪಸ್ಥಿತರಿದ್ದರು.

 

 

 

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here