Saturday 5th, July 2025
canara news

ಮಂಗಳೂರಿನಲ್ಲಿ ಮತ್ತೆ ಗ್ಯಾಂಗ್ ವಾರ್: ಓರ್ವ ಅಮಾಯಕ ಬಲಿ

Published On : 22 Jan 2018   |  Reported By : canaranews network


ಮಂಗಳೂರು: ಮಂಗಳೂರನ್ನು ತಲ್ಲಣಿಸಿದ್ದ ರೌಡಿ ಇಲ್ಯಾಸ್ ಹತ್ಯೆ ಸುದ್ದಿ ಇನ್ನೂ ಹಸಿಯಾಗಿರುವಾಗಲೇ ಮತ್ತೊಂದು ಬರ್ಬರ ಹತ್ಯೆಗೆ ಕರಾವಳಿ ನಗರ ಸಾಕ್ಷಿಯಾಗಿದೆ.

ಮಂಗಳೂರಿನ ತಣ್ಣೀರುಬಾವಿಯಲ್ಲಿ ದುಷ್ಕರ್ಮಿಗಳು ಶಿವರಾಜ್(39) ಎಂಬುವವರನ್ನು ಹತ್ಯೆಗೈದಿದ್ದಾರೆ. ತಮ್ಮನ ಮೇಲಿನ ದ್ವೇಷಕ್ಕೆ ಅಣ್ಣನನ್ನು ಕೊಲೆಗೈಯಲಾಗಿದೆ ಎಂದು ಹೇಳಲಾಗುತ್ತಿದೆ. ರಾತ್ರಿ ಮನೆಯ ಟೆರೇಸ್ ನಲ್ಲಿ ಮಲಗಿದ್ದ ಶಿವರಾಜ್ ಅವರನ್ನು ಮೂವರು ದುಷ್ಕರ್ಮಿಗಳು ಕೊಲೆ ಮಾಡಿದ್ದು, ಮೃತ ಶಿವರಾಜ್ ತಮ್ಮ ಭರತೇಶ್ ರೌಡಿ ಶೀಟರ್ ಆಗಿದ್ದ ಎಂಬುದು ಮೂಲಗಳಿಂದ ತಿಳಿದುಬಂದಿದೆ.ಭರತೇಶ್ ಮೇಲಿನ ದ್ವೇಷಕ್ಕೆ, ಯಾವುದೇ ಅಪರಾಧ ಪ್ರಕರಣಗಳಲ್ಲೂ ಕಾಣಿಸಿಕೊಳ್ಳದ, ಅಮಾಯಕ ಶಿವರಾಜ್ ನನ್ನು ಕೊಲೆ ಮಾಡಲಾಗಿದೆ. ದುಷ್ಕರ್ಮಿಗಳ ವಿರುದ್ಧ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here