Sunday 5th, May 2024
canara news

'ಸಾಲ ಮೇಳದ ಸಂಗ್ರಾಮ' ಪೂಜಾರಿ ಆತ್ಮಚರಿತ್ರೆ ಜ.26ಕ್ಕೆ ಬಿಡುಗಡೆ

Published On : 24 Jan 2018   |  Reported By : canaranews network


ಮಂಗಳೂರು : 'ಸಾಲ ಮೇಳದ ಸಂಗ್ರಾಮ ಎಂಬ ಹೆಸರಿನ ನನ್ನ ಆತ್ಮ ಚರಿತ್ರೆಯನ್ನು ಜ.26ರಂದು ಬಿಡುಗಡೆ ಮಾಡಲಿದ್ದೇನೆ' ಎಂದು ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಹೇಳಿದರು.ಸೋಮವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, 'ನನ್ನ ಆತ್ಮಕಥೆ ಹೆಸರು 'ಸಾಲ ಮೇಳದ ಸಂಗ್ರಾಮ' ಎಂದು ಇಟ್ಟಿದ್ದೇನೆ. ರಾತ್ರಿ ಹಗಲೆನ್ನದೆ ಆತ್ಮಕಥೆಯನ್ನು ಬರೆದು ಮುಗಿಸಿದ್ದೇನೆ.

ನೆನಪಿಗೆ ಬಂದ ಎಲ್ಲಾ ವಿಷಯಗಳನ್ನು ನಮೂದಿಸಿದ್ದೇನೆ' ಎಂದರು.‘ಬಾಲ್ಯದ ಕಷ್ಟ, ಜೀವನದ ಸವಾಲು, ವಕೀಲ ವೃತ್ತಿ ಜೀವನದ ಪಾಠ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜೊತೆಗಿನ ಒಡನಾಟ, ರಾಜಕೀಯ ಜೀವನದ ಬಗ್ಗೆ ಬರೆದಿದ್ದೇನೆ. ಯಾರಿಗೂ ನೋವು ಮಾಡುವ ಉದ್ದೇಶದ ಬರಹ ಇಲ್ಲ. ಎಲ್ಲಿಯೂ ಬಣ್ಣದ ಮಾತುಗಳಿಲ್ಲ' ಎಂದು ಪೂಜಾರಿ ಸ್ಪಷ್ಟಪಡಿಸಿದರು.ರಾಜಕೀಯ ಏರುಪೇರುಗಳನ್ನು ಆತ್ಮ ಕಥೆಯಲ್ಲಿ ಸೇರಿಸಿದ್ದೇನೆ . ಕುದ್ರೋಳಿ ಸೇರಿದಂತೆ ಬೇರೆ ದೇವಸ್ಥಾನದ ಚರಿತ್ರೆಯನ್ನೂ ಬರೆದಿದ್ದೇನೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಆತ್ಮಕಥೆ ಬಿಡುಗಡೆಗೊಳಿಸುವ ಆಸೆಯಿತ್ತು. ಆದರೆ, ನನ್ನ ಆತ್ಮಚರಿತ್ರೆಯನ್ನು ನಾನೇ ಬಿಡುಗಡೆ ಮಾಡಿದರೆ ಉತ್ತಮವೆಂದು ನಿರ್ಧರಿಸಿದ್ದೇನೆ' ಎಂದರು.

'ಆಡಳಿತದಲ್ಲಿ ಎಡವಿದಾಗ ಮುಖ್ಯಮಂತ್ರಿ ಜೊತೆ ಮಾತನಾಡಿ ಅವರಿಗೆ ಸಲಹೆ ಕೂಡಾ ನೀಡಿದ್ದೇನೆ. ಆದರೆ, ಯಾವ ಸಲಹೆಯನ್ನೂ ಅವರು ಸ್ವೀಕರಿಸಿಲ್ಲ. ಮುಂದಿನ 20 ವರ್ಷಗಳ ಕಾಲ ಸಿಎಂ ಆಗಿ ಎಂದು ಕೂಡಾ ಹೇಳಿದ್ದೆ ಈ ಎಲ್ಲಾ ವಿಚಾರಗಳ ಬಗ್ಗೆ ಪುಸ್ತಕದಲ್ಲಿ ನಮೂದಿಸಿದ್ದೇನೆ' ಎಂದು ವಿವರಣೆ ನೀಡಿದರು.ಇನ್ನು, 'ಪುಸ್ತಕ ಬಿಡುಗಡೆಯಾದ ಬಳಿಕ ಕೆಲ ದಿನಗಳಲ್ಲಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಖುದ್ದಾಗಿ ಪುಸ್ತಕ ನೀಡುತ್ತೇನೆ' ಎಂದು ಪೂಜಾರಿ ವಿವರಿಸಿದರು.




More News

ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
"ದ ಡಾಪರ್ ಷೋ"
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ

Comment Here