ಮಂಗಳೂರು: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ನಾಯಕರು ಮತದಾರ ಓಲೈಸಲು ವಿವಿಧ ಕಸರತ್ತು ನಡೆಸುವುದು ಸಾಮಾನ್ಯ. ಇದೀಗ ಸಚಿವ ಯುಟಿ ಖಾದರ್ ಕೊರಗಜ್ಜನ ದೈವಸ್ಥಾನಕ್ಕೆ ಹೋಗಿ ಹರಕೆ ನೀಡಿರುವ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಪುಲ್ ವೈರಲ್ ಆಗಿದ್ದು ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ.
ಸಚಿವರು ರಾಜಕೀಯ ಬೇಳೆ ಬೇಯಿಸಲು ಕೋಲಗಳಿಗೆ ಹೋಗಿ ಹರಕೆಯನ್ನು ನೀಡಿದ್ದು, ಮುಸ್ಲಿಂ ನಾಯಕರು ಈ ರೀತಿ ಮಾಡುವುದು ಸರಿಯಲ್ಲ ಎಂದು ಸ್ವಜಾತಿ ಬಾಂಧವರೇ ವಿಡಿಯೋವನ್ನು ವೈರಲ್ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಒಟ್ನಲ್ಲಿ ಚುನಾವಣೆ ಬರುತ್ತಿದ್ದಂತೆ ಸಚಿವರ ಈ ವಿಡಿಯೋ ವೈರಲ್ ಆಗಿದ್ದು ಚರ್ಚೆಗೆ ಗ್ರಾಸವಾಗಿದೆ.