ವಿಜಯ ಕಾಲೇಜು ಹಳೆ ವಿದ್ಯಾಥಿ೯ ಸಂಘದ ವಾರ್ಷಿಕ ಸ್ನೇಹ ಸಮ್ಮೀಲನ
ಮುಂಬಯಿ, ಜ.30: ವಿಜಯ ಕಾಲೇಜು ಮೂಲ್ಕಿ ಇದರ ಹಳೆ ವಿದ್ಯಾಥಿರ್s ಸಂಘದ ಮುಂಬಯಿ ಘಟಕದ ವಾರ್ಷಿಕ ಸ್ನೇಹ ಸಮ್ಮೀಲನವು ಇದೇ ಫೆ.17ರ ಶನಿವಾರ ಸಂಜೆ 6.00 ಗಂಟೆಗೆ ಕುರ್ಲಾ ಪೂರ್ವದಲ್ಲಿನ ಬಂಟರ ಸಂಘದ ರಂಜನಿ ಸುಧಾಕರ್ ಎಸ್.ಹೆಗ್ಡೆ ಅನೆಕ್ಸ್ ಕಟ್ಟಡದ ಕಿರು ಸಭಾಗೃಹದಲ್ಲಿ ಆಯೋಜಿಸಲಾಗಿದೆ.
Nityananda Hegde CA Somanath Karkera CA Shankar B.Shetty
Karnire Vishwanath Shetty Anand Shetty Vasudeva M.Salyan A
Harish K Hejmady Nityananad Hegde
ಹಳೆ ವಿದ್ಯಾಥಿ೯ ಸಂಘದ ಮುಂಬಯಿ ಘಟಕದ ಅಧ್ಯಕ್ಷ ಸಿಎ| ಸೋಮನಾಥ ಕುಂದರ್ ಅಧ್ಯಕ್ಷತೆಯಲ್ಲಿ ನೇರವೇರಲಿದ್ದು, ಸಂಘದ ಮುಂಬಯಿ ಘಟಕದ ಗೌರವಾಧ್ಯಕ್ಷ ಶಿರ್ವಾ ನಿತ್ಯಾನಂದ ಹೆಗ್ಡೆ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿsಯಾಗಿ ವಿದ್ಯಾಥಿರ್s ಸಂಘದ ಸ್ಥಾಪಕಾಧ್ಯಕ್ಷ, ಬಂಟ್ಸ್ ಸಂಘ ಮುಂಬಯಿ ಇದರ ಎಸ್.ಎಂ ಶೆಟ್ಟಿ ಶೈಕ್ಷಣಿಕ ಸಮಿತಿ ಕಾರ್ಯಧ್ಯಕ್ಷ ಸಿಎ| ಶಂಕರ ಬಿ.ಶೆಟ್ಟಿ, ಗೌರವ ಅತಿಥಿsಗಳಾಗಿ ವಿಜಯ ಕಾಲೇಜು ಮೂಲ್ಕಿ ಗರ್ವನಿಂಗ್ ಕೌನ್ಸಿಲಿಂಗ್ನ ಕಾರ್ಯಾಧ್ಯಕ್ಷ ಸುಹಾಸ್ ಹೆಗ್ಡೆ ನಂದಳಿಕೆ, ವಿಜಯ ಕಾಲೇಜು ಮೂಲ್ಕಿ ಪ್ರಾಂಶುಪಾಲ ಡಾ| ಕೆ.ನಾರಾಯಣ ಪೂಜಾರಿ, ವಿಜಯ ಕಾಲೇಜು ಮೂಲ್ಕಿ ಹಳೆ ವಿದ್ಯಾಥಿರ್s ಸಂಘದ ಅಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಆಗಮಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕಾಲೇಜಿನ ಇಂಗ್ಲೀಷ್ ಬೋಧಕ ನಿವೃತ್ತ ಪ್ರಾಂಶುಪಾಲ ಪೆÇ್ರ| ಕೃಷ್ಣ ಭಟ್ ಹಾಗೂ ವಿಶ್ರಾಂತ ಪ್ರಾಚಾರ್ಯ ಪೆÇ್ರಫೆಸರ್ ಡಾ| ಕೆ.ಜಗದೀಶ್ ಅವರಿಗೆ ಗುರುವಂದನೆ ಮತ್ತು ಮಹಾನಗರದ ಉದ್ಯಮಿ ಯದುನಾರಾಯಣ ಎಂ.ಶೆಟ್ಟಿ ಇವರನ್ನು ಸನ್ಮಾನಿಸಲಾಗುವುದು ಹಾಗೂ ಪ್ರತಿಷ್ಠಿತ ಲೆಕ್ಕ ಪರಿಶೋಧಕ ಸಿಎ| ವಸಂತ್ ಪೂಜಾರಿ ಅವರಿಗೆ ಸಾಧಕ ಗೌರವವನ್ನಿತ್ತು ಅಭಿನಂದಿಸಲಾಗುವುದು.
ಈ ಕಾರ್ಯಕ್ರಮದಲ್ಲಿ ವಿಜಯ ಕಾಲೇಜು ಮೂಲ್ಕಿ ಇದರ ಎಲ್ಲಾ ಹಳೆ ವಿದ್ಯಾಥಿ೯ ಗಳು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಉಪಾಧ್ಯಕ್ಷ ಆನಂದ್ ಶೆಟ್ಟಿ , ಕಾರ್ಯದರ್ಶಿ ವಾಸುದೇವ ಎಂ. ಸಾಲ್ಯಾನ್ ಮತ್ತು ಕೋಶಾಧಿಕಾರಿ ಹರೀಶ್ ಕೆ.ಹೆಜ್ಮಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.