Friday 3rd, May 2024
canara news

ಆಳ್ವಾಸ್ ನಲ್ಲಿ ಐಎಸ್ಒ ಕಾರ್ಯಾಗಾರ ಸಂಪನ್ನ

Published On : 02 Feb 2018   |  Reported By : media release


ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ನಡೆದ ಐಎಸ್ಒ 9000 ಮತ್ತು 14000 ಗುಣಮಟ್ಟದ ಕುರಿತಾದ ಐದು ದಿನಗಳ ಕಾರ್ಯಾಗಾರವು ಫೆ 1 ರಂದು ಸಂಪನ್ನಗೊಂಡಿತು.

ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯ ಅತಿಥಿ ಮೈಸೂರಿನ ಜೆ ಎಸ್ ಎಸ್ ವಿಶ್ವವಿದ್ಯಾಲಯದ ಕುಲಪತಿ ಡಾ . ಕೆ ಎಸ್ ಲೋಕೇಶ್ ಮಾತನಾಡಿ ಇಂದಿನ ವಿದ್ಯಾರ್ಥಿಗಳು ಉತ್ಪನ್ನಗಳ ಗುಣಮಟ್ಟದ ಕುರಿತು ಸಂಶೋಧನೆ ನಡೆಸಿ ಉತ್ಕೃಷ್ಟತೆಯ ಬಗ್ಗೆ ಗಮನಹರಿಸಬೇಕೆಂದು ಕರೆಯಿತ್ತರು . ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ , ಮೈಸೂರು ಇದರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ ರವಿ ಡಿ ಆರ್ , ಜೆ ಎಸ್ ಎಸ್ ವಿಜ್ಞಾನ ಮತ್ತು ತಾಂತ್ರಿಕ ಕಾಲೇಜಿನ ಡಾ . ಉದಯ ಶಂಕರ್ , ಕಾರ್ಯಾಗಾರದ ಸಂಚಾಲಕ ಪ್ರೊ ಸಂಜಯ್ , ಪ್ರೊ ಉಮೇಶ್ ಚಂದ್ರ ಉಪಸ್ಥಿತರಿದ್ದರು.

ಪ್ರಾಧ್ಯಾಪಕಿ ಐಶ್ವರ್ಯ ಲಕ್ಷ್ಮಿ ಸ್ವಾಗತಿಸಿದರು . ಸಿವಿಲ್ ವಿಭಾಗದ ಮುಖ್ಯಸ್ಥ ಪ್ರೊ ಅಜಿತ್ ಹೆಬ್ಬಾರ್ ವಂದಿಸಿದರು . ಪ್ರೊ ಆದಿತ್ಯ ಶೆಣೈ ಕಾರ್ಯಕ್ರಮ ನಿರೂಪಿಸಿದರು .




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here