Wednesday 6th, August 2025
canara news

ಮಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ಗೆ ಮಸಿ ಬಳಿದ ಕಿಡಿಗೇಡಿಗಳು

Published On : 04 Feb 2018   |  Reported By : canaranews network


ಮಂಗಳೂರು: ಮಂಗಳೂರು ನಗರದ ಅನೇಕ ಕಡೆ ಇಂದಿರಾ ಕ್ಯಾಂಟೀನ್ ನಿರ್ಮಾಣವಾಗುತ್ತಿದ್ದು, ಸುರತ್ಕಲ್ ಸಮೀಪವೂ ಇಂದಿರಾ ಕ್ಯಾಂಟೀನ್ ನಿರ್ಮಾಣಗೊಳ್ಳುತ್ತಿದೆ.ಆದರೆ ಸುರತ್ಕಲ್ ಸಮೀಪ ನಿರ್ಮಾಣ ಹಂತದಲ್ಲಿರುವ ಇಂದಿರಾ ಕ್ಯಾಂಟೀನ್ ವೊಂದಕ್ಕೆ ಕಿಡಿಗೇಡಿಗಳು ಮಸಿ ಬಳಿದ ಘಟನೆ ನಡೆದಿದೆ.

ಶಾಸಕ ಮೊಯಿದ್ದೀನ್ ಬಾವ ಅವರ ಮುತುವರ್ಜಿಯಲ್ಲಿ ನಿರ್ಮಾಣವಾಗುತ್ತಿದ್ದ ಕ್ಯಾಂಟೀನ್ ಇದಾಗಿದ್ದು, ನಿರ್ಮಾಣ ಹಂತದಲ್ಲಿರುವ ಇಂದಿರಾ ಕ್ಯಾಂಟೀನ್ ಗೆ ಕೆಲ ಕಿಡಿಗೇಡಿಗಳು ಸೇರಿಕೊಂಡು ಮಸಿ ಬಳಿದಿದ್ದಾರೆ.

ಕ್ಯಾಂಟೀನ್ ನಿರ್ಮಾಣಗೊಳ್ಳುತ್ತಿರುವ ಸಮೀಪ ಇಂದಿರಾಗಾಂಧಿ ಅವರ ಭಾವಚಿತ್ರವೊಂದನ್ನು ಅಳವಡಿಸಲಾಗಿತ್ತು. ಈ ಭಾವಚಿತ್ರಕ್ಕೆ ಕಿಡಿಗೇಡಿಗಳು ಮಸಿ ಬಳಿದಿದ್ದಾರೆ.ಶನಿವಾರ ತಡರಾತ್ರಿ ಈ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here