Friday 26th, April 2024
canara news

ಕರಾವಳಿಯಲ್ಲಿ ಬಿರುಸುಗೊಂಡ ರಾಜಕೀಯ ಚಟುವಟಿಕೆ

Published On : 15 Feb 2018   |  Reported By : canaranews network


ಮಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇರುವಂತೆ, ಕರಾವಳಿಯಲ್ಲೂ ಬಿರುಸಿನ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ. ತಮ್ಮ ತಮ್ಮ ಪಕ್ಷಗಳನ್ನು ಇನ್ನಷ್ಟು ಬಲಶಾಲಿಗೊಳಿಸಿಲು ರಾಜ್ಯದ ಹಾಗೂ ಜಿಲ್ಲಾ ನಾಯಕರುಗಳು ಕೇಂದ್ರ ನಾಯಕರ ಮೊರೆ ಹೋಗಿದ್ದಾರೆ .

ಅದರಂತೆ ಬಿಜೆಪಿ ಪಕ್ಷ ಸಂಘಟನೆ ಹಾಗೂ ಚುನಾವಣಾ ಪ್ರಚಾರಕ್ಕಾಗಿ ಫೆಬ್ರವರಿ 19ರ ರಾತ್ರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಷಾ ಮಂಗಳೂರಿಗೆ ಆಗಮಿಸಿ, ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಂಗಲಿದ್ದಾರೆ. ಫೆಬ್ರವರಿ 20 ರ ಬೆಳಗ್ಗೆ ಕುಕ್ಕೆ ಸುಬ್ರಹ್ಮಣ್ಯ ದರ್ಶನ ಮಾಡಲಿದ್ದು, ಬಳಿಕ ಉಡುಪಿಯ ಶ್ರೀಕೃಷ್ಣಮಠಕ್ಕೆ ತೆರಳಲಿದ್ದಾರೆ. ಫೆಬ್ರವರಿ 22ರಂದು ದೀಪಕ್​ ರಾವ್​ ಮನೆಗೆ ತೆರಳಲಿದ್ದಾರೆ.

ಜೊತೆಗೆ ಬಿಜೆಪಿ ಮೀನುಗಾರರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಇದಲ್ಲದೆ, ಮಡಿಕೇರಿಯ ಕುಶಾಲನಗರದಿಂದ ಹಾಗೂ ಅಂಕೋಲಾದಿಂದ ಮಾರ್ಚ್​ 3ರಿಂದ 6ರವರೆಗೆ ಬಿಜೆಪಿ ಕರ್ನಾಟಕ ಸುರಕ್ಷಾ ಯಾತ್ರೆ ನಡೆಸಲಿದೆ. ಸುರತ್ಕಲ್​ನಲ್ಲಿ ಸಮಾರೋಪ ನಡೆಯಲಿದೆ. ಅಲ್ಲಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಆಗಮಿಸಲಿದ್ದಾರೆ. ಇದರ ಜೊತೆಗೆ 27ರಂದು ದಾವಣಗೆರೆಯಲ್ಲಿ ಬೃಹತ್​ ರೈತ ಸಮಾವೇಶ ನಡೆಯಲಿದ್ದು, ಈ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here