Saturday 20th, April 2024
canara news

ಕೇಂದ್ರ ಸರ್ಕಾರದಿಂದ ಅಡಿಕೆ ಬೆಳೆಗಾರರಿಗೆ ಗಂಡಾಂತರ: ಐವನ್ ಡಿಸೋಜಾ

Published On : 18 Feb 2018   |  Reported By : canaranews network


ಮಂಗಳೂರು: ಅಡಿಕೆ ಬೆಳೆಗಾರರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಯನ್ನು ಕೇಂದ್ರ ಸರಕಾರ ಸೃಷ್ಟಿಸಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ ಆರೋಪಿಸಿದ್ದಾರೆ .

ಮಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸತ್ ಕಲಾಪ ಸಂದರ್ಭದಲ್ಲಿ ಅಡಿಕೆ ಬಳಕೆ ಕ್ಯಾನ್ಸರ್ ಗೆ ಕಾರಣವಾಗುತ್ತದೆಯೇ ? ಎಂದು ಬಿಹಾರದ ಸಿವಾನ್ ಸಂಸದ ಓಂಪ್ರಕಾಶ್ ಯಾದವ್ ಕೇಳಿದ ಪ್ರಶ್ನೆಗೆ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸಚಿವರಾದ ಅನುಪ್ರಿಯಾ ಪಟೇಲ್, "ಅಡಿಕೆ ಕ್ಯಾನ್ಸರ್ ಕಾರಕ" ಎಂದು ಸ್ಪಷ್ಟ ಉತ್ತರ ನೀಡಿರುವುದು ದುರಂತ ಎಂದು ಅವರು ಹೇಳಿದರು.ಕೇಂದ್ರ ಸರಕಾರದಿಂದ ಅಡಿಕೆ ಬೆಳೆಗಾರರಿಗೆ ಅನ್ಯಾಯವಾಗುತ್ತಿದ್ದರೂ ರಾಜ್ಯದ ಸಂಸದರು ಧ್ವನಿ ಎತ್ತದಿರುವುದು ಖಂಡನೀಯ ಎಂದು ಅವರು ಕಿಡಿಕಾರಿದರು. ಅಡಿಕೆ ಬೆಳೆಗಾರರ ಹಿತರಕ್ಷಣೆಗಾಗಿ ಅಡಿಕೆ ಬೆಳೆ ಪ್ರದೇಶದ ಸಂಸದರ ವೇದಿಕೆ ಅಸ್ತಿತ್ವದಲ್ಲಿದೆ. ಆದರೆ ವೇದಿಕೆ ನಿಷ್ಕ್ರೀಯವಾಗಿದೆ ಎಂದು ಅವರು ಆರೋಪಿಸಿದರು.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here