ತುಳು ಕನ್ನಡಿಗರಿಗೆ `ಛತ್ರಪತಿ ಶಿವಾಜಿ ಮಹಾರಾಜ್ ಸಾಧನಾ ಪುರಸ್ಕಾರ' ಪ್ರದಾನ
(ಚಿತ್ರ / ವರದಿ : ರೊನ್ಸ್ ಬಂಟ್ವಾಳ್)
ಮುಂಬಯಿ, ಫೆ.27: ದ ಪೀಪಲ್'ಸ್ ಆರ್ಟ್ ಸೆಂಟರ್ (ರಿ.) ಮುಂಬಯಿ ಆರನೇ `ಛತ್ರಪತಿ ಶಿವಾಜಿ ಮಹಾರಾಜ್ ಸಾಧನಾ ಪುರಸ್ಕಾರ-2018' ಪ್ರದಾನ ಸಮಾರಂಭ ಇಂದಿಲ್ಲಿ ಆದಿತ್ಯವಾರ ಸಂಜೆ ಅಂಧೇರಿ ಪೂರ್ವದ ಹೊಟೇಲ್ ಕೊಹಿನೂರು ಕಾಂಟಿನೆಂಟಲ್ನ ಸಭಾಗೃಹದಲ್ಲಿ ಪ್ರದಾನಿಸಲ್ಪಟ್ಟಿತು. ಸಮಾರಂಭದಲ್ಲಿ ಮುಖ್ಯ ಅತಿಥಿüಯಾಗಿ ಮರಾಠಿ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ರಾಜ್ ದತ್ತಾ, ಗೌರವ ಅತಿಥಿüಗಳಾಗಿ ಡಾ| ಸಂದೇಶ್ ಎಂ.ವಾಘ್ ಉಪಸ್ಥಿತರಿದ್ದು ಪೀಪಲ್'ಸ್ ಆರ್ಟ್ ಸ್ಮರಣಿಕೆ ಬಿಡುಗಡೆ ಗೊಳಿಸಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನಿಸಿದರು.
ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಸಲಹಾ ಸಮಿತಿ ಸದಸ್ಯರುಗಳಾದ ಡಾ| ಸುರೇಶ್ ಎಸ್.ರಾವ್ ಕಟೀಲು (ಬಿಎಸ್ಕೆಬಿ ಅಸೋಸಿಯೇಶನ್ನ ಅಧ್ಯಕ್ಷರು), ನ್ಯಾ| ರೋಹಿಣಿ ಜೆ.ಸಾಲ್ಯಾನ್ (ಭಾರತ್ ಬ್ಯಾಂಕ್ನ ಉಪ ಕಾರ್ಯಾಧ್ಯಕ್ಷೆ), ರೈಲ್ವೇ ಯಾತ್ರಿ ಸಂಘ ಮುಂಬಯಿ ಅಧ್ಯಕ್ಷ ವಿರಾರ್ ಶಂಕರ್ ಶೆಟ್ಟಿ, ಒಕ್ಕಲಿಗ ಸಮೂದಾಯ ಮುಂಬಯಿ ಇದರ ಜಯಲಕ್ಷ್ಮೀ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ ಕಾರ್ಯಾಧ್ಯಕ್ಷ ರಂಗಪ್ಪ ಸಿ.ಗೌಡ ಹಾಗೂ ಉದ್ಯಮಿಗಳಾದ ಸಾಬು ಡೇನಿಯಲ್, ಕೆ.ಶ್ರೀನಿವಾಸನ್, ವೇಣು ಪಿ.ನಾಯರ್, ಎಂ.ಜಿ ಅರವಿಂದಕ್ಷನ್ ಮೆನನ್, ಟಿ.ಗಣಪತಿ, ಪ್ರಕಾಶ್ ಮೆನನ್, ಅಪ್ಪ ದುರೈ ಇವರಿಗೆ ಅತಿಥಿüಗಳು `ಛತ್ರಪತಿ ಶಿವಾಜಿ ಮಹಾರಾಜ್ ಸಾಧನಾ ಪುರಸ್ಕಾರ-2018' ಪ್ರದಾನಿಸಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಕೆ.ರಾಜೇ ಗೌಡ, ಜಯರಾಮ ಶೆಟ್ಟಿ, ಪಿ.ಡಿ ಶೆಟ್ಟಿ, ಪದ್ಮನಾಭ ಸಸಿಹಿತ್ಲು, ಜಿತೇಶ್ ಗೌಡ ಮತ್ತಿತರು ಉಪಸ್ಥಿತರಿದ್ದು ಪುರಸ್ಕೃತರಿಗೆ ಅಭಿನಂದಿಸಿದರು. ರಾಷ್ಟ್ರಗೀತೆಯೊಂದಿಗೆ ಸಮಾರಂಭ ಆದಿಗೊಂಡಿತು. ನಾಗೇಶ್ಕುಮಾರ್ ಸುರ್ವೆ ಮತ್ತು ಕು| ರೂಪಾಲಿ ಸುರ್ವೆ ವಿಸ್ಹಿಲ್ ಸಂಗೀತವನ್ನಿತ್ತರು. ಆರ್ಟ್ ಸೆಂಟರ್ನ ಮುಖ್ಯಸ್ಥ ಗೋಪಾಲಕೃಷ್ಣ ಪಿಳ್ಳೆ ಸ್ವಾಗತಿಸಿದರು. ನಿಹಾ ರಿಖಾ ಪುರಸ್ಕೃತರನ್ನು ಪರಿಚಯಿಸಿ, ಕಾರ್ಯಕ್ರಮ ನಿರೂಪಿಸಿ ಅಭಾರ ಮನ್ನಿಸಿದರು.