Friday 19th, April 2024
canara news

ಬಿಆರ್ ಸಮೂಹದ ಸಿಎಂಡಿ ಬಿ.ಆರ್ ಶೆಟ್ಟಿ ಅವರನ್ನು ಗೌರವಿಸಿದ ಬೊಂಬೇ ಬಂಟ್ಸ್ ಅಸೋಸಿಯೇಶನ್

Published On : 28 Feb 2018   |  Reported By : Rons Bantwal


ಮುಂಬಯಿ, ಫೆ.28: ಬೊಂಬೇ ಬಂಟ್ಸ್ ಅಸೋಸಿಯೇಶನ್ ಇತ್ತೀಚೆಗೆ ಸಯಾನ್ ಧಾರಾವಿಯ ರಾಜೀವ ಗಾಂಧಿ ಡಿಸ್ಟ್ರಿಕ್ಟ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಕ್ರೀಡಾಂಗಣದಲ್ಲಿ ಸಂಪನ್ನ ಗೊಳಿಸಿದ 12ನೇ ವಾರ್ಷಿಕ ಕ್ರೀಡೋತ್ಸವಕ್ಕೆ ಪ್ರಾಯೋಜಕತ್ವರಾಗಿ ಸಹಕರಿಸಿದ್ದ ಉಡುಪಿ ಮೂಲದ ಮುಂಬಯಿನ ಪ್ರತಿಷ್ಠಿತ ಉದ್ಯಮಿ, ಕೊಡುಗೈದಾನಿ, ಬಿಆರ್ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಬಿ.ಆರ್ ಶೆಟ್ಟಿ ಅವರನ್ನು ಕಳೆದ ಸೋಮವಾರ ಅಸೋಸಿಯೇಶನ್‍ನ ಪರವಾಗಿ ಗೌರವಿಸಿ ಅಭಿನಂದಿಸಲಾಯಿತು.

ಬೊಂಬೇ ಬಂಟ್ಸ್ ಅಸೋಸಿಯೇಶನ್‍ನ ಮಾಜಿ ಅಧ್ಯಕ್ಷ ಹಾಗೂ ಮಾಜಿ ಕ್ರೀಡಾ ಸಮಿತಿ ಕಾರ್ಯಧ್ಯಕ್ಷರೂ ಆಗಿದ್ದ ಶ್ಯಾಮ ಎನ್.ಶೆಟ್ಟಿ ಅವರು ಅಂಧೇರಿ ಅಲ್ಲಿನ ಬಿಆರ್ ಸಮೂಹ ಸಂಸ್ಥೆಯ ಕಾರ್ಯಾಲಯಕ್ಕೆ ತೆರಲಿ ಕ್ರೀಡೋತ್ಸವದ ಸ್ಮರಣಿಕೆಯನ್ನಿತ್ತು ಗೌರವಿಸಿ ಅಭಿವಂದಿಸಿದರು. ಈ ಸಂದರ್ಭದಲ್ಲಿ ಅಸೋಸಿಯೇಶನ್‍ನ ಇನ್ನಬೀಡು ರವೀಂದ್ರ ಬಿ.ಶೆಟ್ಟಿ ಮತ್ತು ಸಂತೋಷ್‍ಕುಮಾರ್ ಆರ್.ಶೆಟ್ಟಿ ಉಪಸ್ಥಿತರಿದ್ದು ಶಾಲು ಹೊದಿಸಿ ಗೌರವಿಸಿದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here