Wednesday 24th, April 2024
canara news

ಬಿಜೆಪಿಯ 'ಜನಸುರಕ್ಷಾ ಯಾತ್ರೆ' ಕೇವಲ ಢೋಂಗಿ ರಾಜಕಾರಣ: ಮುತಾಲಿಕ್

Published On : 02 Mar 2018   |  Reported By : canaranews network


ಮಂಗಳೂರು: ಬಿಜೆಪಿ ನಡೆಸಲು ಉದ್ದೇಶಿಸಿರುವ ಜನಸುರಕ್ಷಾ ಯಾತ್ರೆ ಕೇವಲ ಢೋಂಗಿ ರಾಜಕಾರಣ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಗುರುವಾರ ಮಾತನಾಡಿದ ಅವರು ಬಿಜೆಪಿಯವರಿಗೆ ಕಾಳಜಿ ಇದ್ದರೆ ಭಟ್ಕಳದಿಂದ ಯಾತ್ರೆ ಆರಂಭಿಸಲಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

"ಭಟ್ಕಳ ಬಿಜೆಪಿ ಶಾಸಕ ಚಿತ್ತರಂಜನ್ ಕೊಲೆ ಪ್ರಕರಣದಲ್ಲಿ ಈವರೆಗೆ ಆರೋಪಿಗಳ ಪತ್ತೆಯಾಗಿಲ್ಲ. 1997ರಲ್ಲಿ ಭಟ್ಕಳದ 21 ಜನರ ಕೊಲೆ ಪ್ರಕರಣವನ್ನು ಈವರೆಗೂ ಭೇದಿಸಲು ಸಾಧ್ಯವಾಗಿಲ್ಲ. ಭಟ್ಕಳ ತಾಲೂಕು ಬಿಜೆಪಿ ಅಧ್ಯಕ್ಷರಾಗಿದ್ದ ತಿಮ್ಮಪ್ಪ ನಾಯ್ಕ ಕೊಲೆಗಾರರನ್ನೂ ಪತ್ತೆ ಮಾಡಲಾಗಿಲ್ಲ ಎಂದು ಹೇಳಿದ ಅವರು, "ಜಗನ್ನಾಥ ಶೆಟ್ಟಿ ಆಯೋಗದ ವರದಿಯನ್ನು ತಮ್ಮ ಅಧಿಕಾರದ ಅವಧಿಯಲ್ಲಿ ಜಾರಿ ಮಾಡಲಾಗದ ಬಿಜೆಪಿಯವರು ಮೋಸ ಮತ್ತು ಅಧಿಕಾರ ದಾಹದಿಂದ ಈಗ ಯಾತ್ರೆ ಹೊರಟಿದ್ದಾರೆ," ಎಂದು ಟೀಕಿಸಿದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here