Thursday 18th, April 2024
canara news

ಕೆಪಿಸಿಸಿ ಅಲ್ಪಸಂಖ್ಯಾತ ರಾಜ್ಯ ಸಂಯೋಜಕರಾಗಿ ಸುನೀಲ್ ಪಾಯಸ್ ನೇಮಕ

Published On : 07 Mar 2018   |  Reported By : Rons Bantwal


ಮುಂಬಯಿ, ಮಾ.07: ಮಹಾನಗರದ ಯುವ ಉದ್ಯಮಿ, ತೆರೆಮರೆಯ ಸಮಾಜ ಸೇವಕ ಕೊಡುಗೈದಾನಿ ನಿತ್ಯಾಧರ್ ಎಲೆಕ್ಟ್ರಿಕಲ್ ಸಂಸ್ಥೆಯ ಮಾಲಕ ಸುನೀಲ್ ಪಾಯಸ್ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ವಿಭಾಗದ ರಾಜ್ಯಾಧ್ಯಕ್ಷ ಜನಾಬ್ ಖುರ್ಷಿದ್ ಅಹ್ಮದ್ ಸೈಯ್ಯದ್ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ವಿಭಾಗದ ಸಂಯೋಜಕರನ್ನಾಗಿ ನೇಮಿಸಿದೆ.

 

ಈ ಬಗ್ಗೆ ಕೆಪಿಸಿಸಿ ರಾಜ್ಯಾಧ್ಯಕ್ಷ ಡಾ| ಜಿ. ಪರಮೇಶ್ವರ ಅವರಿಗೆ ನೇಮಕಾತಿಯ ಅಧಿಕೃತಪತ್ರವನ್ನು ರವಾನಿಸಿ ನೇಮಕಾತಿಯನ್ನು ದೃಢಪಡಿಸಿದ್ದಾರೆ.

ಪಾಯಸ್ ಅವರನ್ನು ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ರಾಜ್ಯಾಧ್ಯಕ್ಷ ಡಾ| ಜಿ.ಪರಮೇಶ್ವರ್, ಕಾರ್ಯನಿರತ ಅಧ್ಯಕ್ಷ ದಿನೇಶ್ ಗುಂಡೂರಾವ್ ಇವರ ನೇತ್ರತ್ವದಲ್ಲಿ ಪಕ್ಷದ ಏಳಿಗೆಗಾಗಿ ಶ್ರಮಿಸಲಿದ್ದಾರೆ. ರಾಜ್ಯದ ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತಕಾ ಐವನ್ ಡಿ'ಸೋಜಾ, ಎಸ್.ಆರ್ ಪಾಟೀಲ್ ವ್ಮತ್ತಿತರ ಸಲಹೆಯಂತೆ ಸುನೀಲ್ ಪಾಯಸ್ ಸೇವಾ ನಿರತರಾಗಲಿದ್ದಾರೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here