Friday 19th, April 2024
canara news

ಮಹತ್ವದ ತೀರ್ಮಾನ, ಅಭಿವೃದ್ಧಿ ಕಾರ್ಯ ಅನುಷ್ಠಾನ ತೃಪ್ತಿ ತಂದಿದೆ; ಕವಿತಾ ಸನಿಲ್

Published On : 08 Mar 2018   |  Reported By : canaranews network


ಮಂಗಳೂರು: ಮಸಾಜ್ ಪಾರ್ಲರ್ ಹಾಗೂ ಸ್ಕಿಲ್ ಗೇಮ್ಗಳಿಗೆ ದಾಳಿ, ಪುರಭವನದ ಬಾಡಿಗೆ ದರ ಇಳಿಕೆ ಸೇರಿದಂತೆ ಹಲವಾರು ಮಹತ್ವಪೂರ್ಣ ತೀರ್ಮಾನ ಕೈಗೊಂಡು, 180 ಕೋ.ರೂ.ಗಳಿಗೂ ಅಧಿಕ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸುವ ಮೂಲಕ ನನ್ನ ಒಂದು ವರ್ಷ ಅವಧಿಯ ಮೇಯರ್ ಹುದ್ದೆ ತೃಪ್ತಿ ತಂದಿದೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ನಿರ್ಗಮನ ಮೇಯರ್ ಕವಿತಾ ಸನಿಲ್ ಹೇಳಿದರು.

ಬುಧವಾರ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕಾರ್ಪೊರೇಟರ್ಗಳು, ಅಧಿಕಾರಿಗಳು, ಮಾಧ್ಯಮದವರ ಸಹಕಾರದಿಂದ ನನ್ನ ಅಧಿಕಾರಾವಧಿಯಲ್ಲಿ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಯಿತು. ವಿಶೇಷವಾಗಿ ಮಂಗಳೂರಿನ ಜನತೆ ಉತ್ತಮ ಸಹಕಾರ ನೀಡಿರುವುದು ಒಳ್ಳೆಯ ಕೆಲಸ ಕೈಗೊಳ್ಳಲು ಸಹಕಾರಿಯಾಯಿತು ಎಂದರು.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here