ಮಂಗಳೂರು: ಮಂಗಳೂರು ನಗರದಲ್ಲಿ ನಿಯಮ ಉಲ್ಲಂಘಿಸಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ಗಳನ್ನು ಹಾಕಿದವರ ವಿರುದ್ಧ ಕಾನೂನಿನಡಿ ಕ್ರಮ ಕೈಗೊಂಡು, ಪ್ರಕರಣ ದಾಖಲಿಸಲಾಗುವುದು ಎಂದು ಟಿ.ಆರ್ ಸುರೇಶ್ ಎಚ್ಚರಿಸಿದ್ದಾರೆ. ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ದೂರು ಆಲಿಸಿದ ಅವರು ಇ ರೀತಿ ಪ್ರತಿಕ್ರಿಯಿಸಿದ್ದಾರೆ.
ಅನಧಿಕೃತ ಫ್ಲೆಕ್ಸ್, ಬ್ಯಾನರ್, ಕಟೌಟ್ಗಳ ಹಾವಳಿ ಹೆಚ್ಚಾಗಿದ್ದು ಈ ವಾರದಲ್ಲಿ ಒಟ್ಟು ಮೂರು ಪ್ರಕರಣಗಳು ದಾಖಲಾಗಿದೆ. ಯಾವುದೇ ಅನುಮತಿ ಪಡೆಯದೇ ಪ್ಲಾಸ್ಟಿಕ್ ಫ್ಲೆಕ್ಸ್ ಹಾಕುವುದನ್ನು ನಿರ್ಬಂದಿಸಲಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನಿನಡಿ ಕ್ರಮ ಕೈಗೊಂಡು, ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.