ಕುಂದಾಪುರ,ಮಾ.19: ಕುಂದಾಪುರ ರೋಜರಿ ಮಾತಾ ಇಗರ್ಜಿಯ ಕಥೊಲಿಕ್ ಸಭಾ ಘಟಕದ, ಪದಾಧಿಕಾರಿಗಳ ಚುನಾವಣೆ ಇಗರ್ಜಿಯ ಸಭಾ ಭವನದಲ್ಲಿ ನೆಡೆಯಿತು.
ಶೈಲಾ ಡಿಆಲ್ಮೇಡಾ ಈ ಸಾಲಿನ ಅಧ್ಯಕ್ಷರಾಗಿ ಅವಿರೋದವಾಗಿ ಆಯ್ಕೆಗೊಂಡರು, ಕಾರ್ಯದರ್ಶಿಯಾಗಿ ಜೂಲಿಯೆಟ್ ಪಾಯ್ಸ್, ನಿಕಟ ಪೂರ್ವ ಅಧ್ಯಕ್ಷರು ಜೇಕಬ್ ಡಿಸೋಜಾ, ನಿಯೋಜಿತ ಅಧ್ಯಕ್ಷರಾಗಿ ವಾಲ್ಟರ್ ಡಿಸೋಜಾ, ಉಪಾಧ್ಯಕ್ಷರಾಗಿ ಬರ್ನಾಡ್ ಜೆ.ಡಿಕೋಸ್ತಾ, ಸಹ ಕಾರ್ಯದರ್ಶಿಯಾಗಿ ನಿರ್ಮಲಾ ಡಿಸೋಜಾ, ಖಚಾಂಚಿಯಾಗಿ ಪ್ರೇಮಾ ಡಿಕುನ್ಹಾ, ವಿಲ್ಸನ್ ಡಿಆಲ್ಮೇಡಾ, ಆಮ್ಚೊ ಸಂದೇಶ್ ಪ್ರತಿನಿಧಿಯಾಗಿ ವಿನ್ಸೆಂಟ್ ಡಿಸೋಜಾ, ರಾಜಕೀಯ ಸಂಚಾಲಕಾರಾಗಿ ಜೋನ್ಸನ್ ಡಿಆಲ್ಮೇಡಾ, ಸರ್ಕಾರಿ ಸವಲತ್ತು ಸಂಚಾಲಕರಾಗಿ ವಿನೋದ್ ಕ್ರಾಸ್ಟೊ, ಲೆಕ್ಕ ಪರಿಸೋಧಕರಾಗಿ ವಿಲ್ಸನ್ ಒಲಿವೇರಾ, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಸುನೀಲ್ ಡಿಸೋಜಾ, ಲೋನಾ ಲುವಿಸ್, ಮೈಕಲ್ ಗೊನ್ಸಾಲ್ವಿಸ್ ಹಾಗೂ ಜೆಮ್ಸ್ ಡಿಸೋಜಾ ಇವರು ಆಯ್ಕೆಗೊಂಡರು. ಚುನಾವಣ ಪ್ರಕ್ರಿಯೆಯನ್ನು ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಫ್ಲಾಯ್ವನ್ ಡಿಸೋಜಾ ಮತ್ತು ನಿಯೋಜಿತ ಅಧ್ಯಕ್ಷರಾದ ಮೈಕಲ್ ಪಿಂಟೊ ಇವರು ನೆಡೆಸಿಕೊಟ್ಟರು. ಅಧ್ಯಾತ್ಮಿಕ ನಿರ್ದೇಶಕರಾದ ವ|ಅನಿಲ್ ಡಿಸೋಜಾ ಆರಿಸಿ ಬಂದವರನ್ನು ಶುಭ ಹಾರೈಸಿ ‘ಸಮಾಜಕ್ಕೆ ಒಳಿತಾಗುವ ಒಳ್ಳೆಯ ಕೆಲಸಗಳನ್ನು ಮಾಡಿ’ ಎಂದು ಶುಭ ಕೋರಿದರು.