Monday 29th, April 2024
canara news

ಯೋಗಿ, ಅಮಿತ್ ಶಾ ಬಂದರೂ ಬಿಜೆಪಿ ಗೆಲ್ಲುವುದಿಲ್ಲ : ಸಿದ್ದರಾಮಯ್ಯ

Published On : 22 Mar 2018   |  Reported By : canaranews network


ಮಂಗಳೂರು: 'ಕರ್ನಾಟಕ ಶಿಶುನಾಳ ಷರೀಫ, ಬಸವಣ್ಣ ಅವರ ನಾಡು. ನರೇಂದ್ರ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಎಷ್ಟು ಬಾರಿ ಬೇಕಾರೂ ಬರಲಿ, ಅವರಿಗೆ ನಿರಾಸೆ ಕಟ್ಟಿಟ್ಟ ಬುತ್ತಿ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಮಂಗಳವಾರ ಸಂಜೆ ಮಂಗಳೂರಿನ ನೆಹರು ಮೈದಾನದಲ್ಲಿ ಜನಾಶೀರ್ವಾದ ಸಮಾವೇಶ ಉದ್ದೇಶಿಸಿ ಅವರು ಮಾತನಾಡಿದರು. ಬೃಹತ್ ಸಮಾವೇಶ ಕರಾವಳಿಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಆಯಿತು.

ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಉತ್ತರ ಪ್ರದೇಶದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದರು.'ಯೋಗಿ ಆದಿತ್ಯನಾಥ್ ಒಂದು ವರ್ಷದಲ್ಲಿ ಸಿಎಂ ಆಗಿ ಜನರ ಭರವಸೆ ಕಳೆದುಕೊಂಡಿದ್ದೀರಿ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಗೆದ್ದ ಸ್ಥಾನ ಕಳೆದುಕೊಂಡಿದ್ದೀರಿ. ಇನ್ನು ಇಲ್ಲಿಗೆ ಬಂದು ಜಾತಿ ವಿಷ ಬೀಜ ಬಿತ್ತು ಕೆಲಸ ಮಾಡುತ್ತಾರೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here