ದೇಶದ ಅತಿ ದೊಡ್ಡ ತರಬೇತಿ ಸೊಸೈಟಿ ಎಂಬ ಹೆಗ್ಗಳಿಕೆಯಿರುವ ಇಂಡಿಯನ್ ಸೊಸೈಟಿ ಆಫ್ ಟ್ರೈನಿಂಗ್ ಎಂಡ್ ಡೆವಲಪ್ಮೆಂಟ್ ನ 53 ನೇ ಶಾಖೆಯು (ಮಂಗಳೂರು-ಉಡುಪಿ) ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇತ್ತೀಚಿಗೆ ಉದ್ಘಾಟನೆಗೊಂಡಿತು .
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಐ ಎಸ್ ಟಿ ಡಿ ಯ ಬೆಂಗಳೂರು ಶಾಖೆಯ ಅಧ್ಯಕ್ಷೆ ಡಾ ಮೀರಾ ವೆಂಕಟ್ ಭಾಗವಹಿಸಿದ್ದರು . ಆಳ್ವಾಸ್ ನಲ್ಲಿ ಐ ಎಸ್ ಟಿ ಡಿ ಶಾಖೆ ಪ್ರಾರಂಭವಾಗುವುದರ ಬಗ್ಗೆ ಹರ್ಷ ವ್ಯಕ್ತಪಡಿಸಿದ ಅವರು ಸಂಸ್ಥೆಯಿಂದ ಇನ್ನೂ ಹೆಚ್ಚಿನ ಕಾರ್ಯಕ್ರಮಗಳು ನಡೆಯಲಿ ಎಂದು ಆಶಿಸಿದರು .
ಇನ್ನೋರ್ವ ಅತಿಥಿ , ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ಟಿ ಸಿ ಸುಜಿತ್ ಮಾತನಾಡಿ , ವಿದ್ಯಾರ್ಥಿಗಳು ಮಾನವ ಸಂಬಂಧಗಳನ್ನು ಬಲಪಡಿಸುವತ್ತ ವಿಶೇಷ ಗಮನ ಹರಿಸಬೇಕೆಂದು ಕರೆಯಿತ್ತರು .
ಐ ಎಸ್ ಟಿ ಡಿ ಸಲಹೆಗಾರ ವರಹಸ್ವಾಮಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ ವಿವೇಕ್ ಆಳ್ವ ಕಾರ್ಯಕ್ರಮ ಸಂಘಟಕರಿಗೆ ಶುಭ ಹಾರೈಸಿ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಲಿದೆ ಎಂದು ತಿಳಿಸಿದರು .
ಮಂಗಳೂರು - ಉಡುಪಿ ಶಾಖೆಯ ಛೇರ್ಮನ್ ಮತ್ತು ಎಂಬಿಎ ಡೀನ್ ಪ್ರೊ ಪಿ ರಾಮಕೃಷ್ಣ ಚಡಗ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗುರುದತ್ ಸೋಮಯಾಜಿ ಕಾರ್ಯಕ್ರಮ ನಿರೂಪಿಸಿ ಧರ್ಮಾನಂದ್ ವಂದಿಸಿದರು .