ಧಾರ್ಮಿಕ ಪೂಜಾಧಿ ಕಾರ್ಯಕ್ರಮದಲ್ಲಿ ಜಯ ಸುವರ್ಣರಿಗೆ ಗೌರವಾರ್ಪಣೆ
(ಚಿತ್ರ / ವರದಿ : ರೋನ್ಸ್ ಬಂಟ್ವಾಳ್)
ಮುಂಬಯಿ, ಮಾ.27: ಕಳೆದ ಶನಿವಾರ ಅಪರಾಹ್ನ ಸಾಂತಕ್ರೂಜ್ ಪೂರ್ವದಲ್ಲಿನ ಬಿಲ್ಲವರ ಭವನದ ಕಿರು ಸಭಾಗೃಹದಲ್ಲಿ ರಚಿಸಿದ ಮಾತಾ ವಿೂನಾಕ್ಷಿ (ಮಧುರೈ) ವೇದಿಕೆಯಲ್ಲಿ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಸಂಚಾಲಕತ್ವದ ಶ್ರೀ ಗುರು ನಾರಾಯಣ ಯಕ್ಷಗಾನ ಮಂಡಳಿ ಹಾಗೂ ಸಾಂಸ್ಕೃತಿಕ ಉಪ ಸಮಿತಿ ವಾರ್ಷಿಕವಾಗಿ ನೆರವೇರಿಸಿದ ಸಾರ್ವಜನಿಕ ಓಂ-ಶನಿ-ಓಂ ಶ್ರೀ ಶನೀಶ್ವರ ಗ್ರಂಥ ಪಾರಾಯಣ ಕಾರ್ಯಕ್ರಮದ ಮಧ್ಯಾಂತರದಲ್ಲಿ ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಅಧ್ಯಕ್ಷರೂ ಮತ್ತು ಭಾರತ್ ಬ್ಯಾಂಕ್ನ ಕಾರ್ಯಾಧ್ಯಕ್ಷ ಜಯ ಸಿ.ಸುವರ್ಣ ಅವರನ್ನು ಅಸೋಸಿಯೇಶನ್ ಅಧ್ಯಕ್ಷ ನಿತ್ಯಾನಂದ ಡಿ.ಕೋಟ್ಯಾನ್ ಮತ್ತು ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ದಯಾನಂದ ಆರ್.ಪೂಜಾರಿ ಮತ್ತು ಗೌ| ಕಾರ್ಯದರ್ಶಿ ಅಶೋಕ್ ಕುಕ್ಯಾನ್ ಸತ್ಕರಿಸಿ ಗೌರವಿಸಿದರು. ರವೀಂದ್ರ ಶಾಂತಿ ಸಾಮೂಹಿಕ ಶನಿಪೂಜೆ ನೆರವೇರಿಸಿ ಪ್ರಸಾದ ವಿತರಿಸಿ ಅನುಗ್ರಹಿಸಿದರು.
ಅಸೋಸಿಯೇಶನ್ನ ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ದಯಾನಂದ ಆರ್.ಪೂಜಾರಿ ಮತ್ತು ವೀಣಾ ದಯಾನಂದ್ ಪೂಜಾರಿ ದಂಪತಿ ಕಲಶವನ್ನು ಪ್ರತಿಷ್ಠಾಪನೆಗೈದÀರು. ಶ್ರೀ ಗುರು ನಾರಾಯಣ ಯಕ್ಷಗಾನ ಮಂಡಳಿ ಕಲಾವಿದರು ಶ್ರೀ ಶನೀಶ್ವರ ಗ್ರಂಥ ಪಾರಾಯಣ ಮತ್ತು ಶ್ರೀ ಶನೀಶ್ವರ ಮಹಾಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಅಸೋಸಿಯೇಶನ್ನ ಪದಾಧಿಕಾರಿಗಳು, ಭಾರತ್ ಬ್ಯಾಂಕ್ನ ನಿರ್ದೇಶಕರು, ಉಪ ಅಸೋಸಿಯೇಶನ್ನ ಸ್ಥಳೀಯ ಮತ್ತು ಸಮನ್ವಯ ಸಮಿತಿಗಳ ಮುಖ್ಯಸ್ಥರು, ಅನೇಕ ಯಕ್ಷಗಾನ ಕಲಾವಿದರು ಉಪಸ್ಥಿತರಿದ್ದರು. ನೆರೆದ ಸೇವಾಥಿರ್s, ಭಕ್ತಾಧಿಗಳು ಸಾಮೂಹಿಕ ಪೂಜಾ ಪ್ರಕ್ರಿಯೆ ನೆರವೇರಿಸಿ ಶ್ರೀ ಶನೈಶ್ವರ ದೇವರ ಕೃಪೆಗೆ ಪಾತ್ರರಾದರು.