ಕಳೆದ ಗುರುವಾರದಂದು ಧರ್ಮಸ್ಥಳ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಿಸಲಾಯಿತು. ಮಹಾವೀರ ಸ್ವಾಮಿಗೆ ಜನ್ಮಾಭಿಷೇಕ, ಮಕ್ಕಳಿಂದ ಅಷ್ಟವಿಧಾರ್ಚನೆ ಪೂಜೆ, ನಾಮಕರಣ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಪೂಜ್ಯ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರು, ಶ್ರೀಮತಿ ಹೇಮಾವತಿ ವಿ.ಹೆಗ್ಗಡೆ ಮತ್ತು ಕುಟುಂಬದವರ ಮಾರ್ಗದರ್ಶನದಲ್ಲಿ ಬಾಹುಬಲಿ ಮಹಿಳಾ ಸೇವಾ ಸಮಿತಿ ವತಿಯಿಂದ ಮಹಾವೀರ ಜಯಂತಿ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಊರ ಶ್ರಾವಕ ಶ್ರಾವಿಕಿಯರು ಪಾಲ್ಗೊಂಡು ಪುಣ್ಯಭಾಗಿಗಳಾದರು.