ಮಂಗಳೂರು: ರಾಜ್ಯದಲ್ಲಿ ವಿಧಾನ ಸಭಾ ಚುನಾವಣೆ ಘೋಷಣೆ ಆಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಮೊಯ್ದೀನ್ ಬಾವಾ ಹಿಂದೂ ಮತದಾರರನ್ನು ಸೆಳೆಯಲು ದೈವಸ್ಥಾನಗಳಗೆ ಭೇಟಿ ನೀಡಿ ಚುನಾವಣೆಯ ಗೆಲುವಿಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ . ಆದರೆ ಶಾಸಕ ಬಾವಾ ಅವರ ಈ ನಡೆಯ ವಿರುದ್ದ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಇತ್ತೀಚೆಗೆ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಸುರತ್ಕಲ್ ಹೊಸಬೆಟ್ಟು ಎಂಬಲ್ಲಿರುವ ಕೋರ್ದಬ್ಬು ದೈವಸ್ಥಾನಕ್ಕೆ ಮೊಯ್ದೀನ್ ಬಾವಾ ಭೇಟಿ ನೀಡಿದ್ದರು. ಚುನಾವಣೆ ಘೋಷಣೆಯಾದ ಹಿನ್ನಲೆಯಲ್ಲಿ ದೈವಸ್ಥಾನದವರ ಆಮಂತ್ರಣದ ಮೇರೆಗೆ ಶಾಸಕ ಬಾವ ಭೇಟಿ ನೀಡಿದ್ದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಎರಡು ದಿನಗಳ ಹಿಂದೆ ನಡೆದ ಈ ಪ್ರಸಂಗದ ವಿಡಿಯೋ ಈಗ ಜಾಲತಾಣದಲ್ಲಿ ವೈರಲ್ ಆಗಿದ್ದು ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ.