ಎಪ್ರೀಲ್ 7 ರಂದು ಉಳ್ಳಾಲ ಕಡಲ ಕಿನಾರೆಯಲ್ಲಿ ನಡೆಯಲಿರುವ ಸಮಸ್ತ ಮಹಾ ಸಮ್ಮೇಳನದ ಪ್ರಚಾರಾರ್ಥ ರಾಜ್ಯಾದ್ಯಂತ ಸಂಚರಿಸಲಿರುವ ಪ್ರಚಾರ ಜಾಥಾಕ್ಕೆ ಸಯ್ಯದ್ ಮದನಿ ದರ್ಗಾ ಸಮಿತಿ ಅದ್ಯಕ್ಷರಾದ ಹಾಜಿ ಅಬ್ದುಲ್ ರಶೀದ್ ಚಾಲನೆ ನೀಡಿದರು.
ಅಮೀರ್ ತಂಙಳ್ ಕಿನ್ಯಾ ದರ್ಗಾ ಝಿಯಾರತ್ ಗೆ ನೇತೃತ್ವ ನೀಡಿದರು. ಜಾಥಾ ನಾಯಕ ಇಬ್ರಾಹೀಂ ಬಾತಿಷ್ ತಂಙಳ್, ಝೈನ್ ಸಖಾಫಿ ಉಳ್ಳಾಲ, ತಬೂಕ್ ದಾರಿಮಿ, ಬಶೀರ್ ಇಸ್ಮಾಯೀಲ್, ಹಾಫಿಲ್ ನಈಮೀ, ಸಿದ್ದೀಖ್ ಅಬೂಬಕರ್ ಇನ್ನಿತರರು ಉಪಸ್ಥಿತರಿದ್ದರು.