Friday 26th, April 2024
canara news

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪ್ರಕಾಶ ಸುವರ್ಣ ಕಟಪಾಡಿ ಆಯ್ಕೆ

Published On : 05 Apr 2018   |  Reported By : Rons Bantwal


ಮುಂಬಯಿ, ಎ.05: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನ ಸಂಸ್ಥೆಯಾದ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಕಾಶ ಸುವರ್ಣ ಕಟಪಾಡಿ ಆಯ್ಕೆಯಾಗಿದ್ದಾರೆ.

  

ಪ್ರಕಾಶ್ ಸುವರ್ಣ                    ಕರುಣಾಕರ ನಾಯಕ್

ಕಾಪು ಪ್ರೆಸ್‍ಕ್ಲಬ್‍ನಲ್ಲಿ ಮಂಗಳವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ಮುಂದಿನ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು ಮತ್ತು ಪ್ರಧಾನ ಕಾರ್ಯದರ್ಶಿ ಸಂತೋಷ್ ಸರಳೇಬೆಟ್ಟು ಚುನಾವಣಾಧಿಕಾರಿಗಳಾಗಿ ಆಯ್ಕೆ ಪ್ರಕ್ರಿಯೆ ನಡೆಸಿದ್ದರು.

ಇತರ ಪದಾಧಿಕಾರಿಗಳಾಗಿ ಪ್ರಧಾನ ಕಾರ್ಯದರ್ಶಿ ಆಗಿ ಕರುಣಾಕರ್ ನಾಯಕ್ ಪಡುಬಿದ್ರಿ, ಉಪಾಧ್ಯಕ್ಷರಾಗಿ ವಿಜಯ ಆಚಾರ್ಯ ಉಚ್ಚಿಲ, ಕೋಶಾಧಿಕಾರಿಬಾಗಿ ಸಂತೋಷ್ ನಾಯ್ಕ್ ಕಾಪು, ಜತೆ ಕಾರ್ಯದರ್ಶಿ ಆಗಿ ರಾಕೇಶ್ ಕುಂಜೂರು, ಕ್ರೀಡಾ ಮತ್ತು ಸಾಂಸ್ಕøತಿಕ ಕಾರ್ಯದರ್ಶಿ ಆಗಿ ಹೇಮನಾಥ್ ಪಡುಬಿದ್ರಿ, ಪ್ರೆಸ್‍ಕ್ಲಬ್ ನಿರ್ವಾಹಕರಾಗಿ ಪ್ರಮೋದ್ ಸುವರ್ಣ ಕಟಪಾಡಿ, ಹಿರಿಯ ಸಲಹೆಗಾರರಾಗಿ ರಾಮಚಂದ್ರ ಆಚಾರ್ಯ ಪಡುಬಿದ್ರಿ, ಪುಂಡಲೀಕ ಮರಾಠೆ ಶಿರ್ವ, ಬಾಲಕೃಷ್ಣ ಪೂಜಾರಿ ಉಚ್ಚಿಲ, ಕಾನೂನು ಸಲಹೆಗಾರರಾಗಿ ಅಶೀದುಲ್ಲಾ ಕಟಪಾಡಿ ಆಯ್ಕೆಯಾಗಿದ್ದಾರೆ.

ನಿರ್ಗಮನಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಎರ್ಮಾಳ್, ಕೋಶಾಧಿಕಾರಿ ಪ್ರಮೋದ್ ಸುವರ್ಣ ಗತವರ್ಷದ ವರದಿ ಹಾಗೂ ಲೆಕ್ಕಪತ್ರ ಮಂಡಿಸಿ, ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು. ಇದೇ ಸಂದರ್ಭ ಉಡುಪಿ ಜಿಲ್ಲಾ ಸಂಘದ ಅಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು ಅವರು ಕಾಪು ಪ್ರೆಸ್‍ಕ್ಲಬ್‍ನ್ನು ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವಾಗಿ ಮಾರ್ಪಡು ಗೊಂಡಿರುವುದನ್ನು ಅಧೀಕೃತವಾಗಿ ಘೋಷಿಸಿದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here