ಎ.20: ಅಖಿಲ ಭಾರತ ಕಾಂಗ್ರೆಸ್ (ಐ) ಪಕ್ಷದ ಅಧಿಕೃತ ಅಭ್ಯಥಿರ್üಯಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ರಾಕೇಶ್ ಮಲ್ಲಿ ನಾಮಪತ್ರ ಸಲ್ಲಿಸುವ ಮುನ್ನ ರೋಮನ್ ಕಾಥೋಲಿಕ್ ಉಡುಪಿ ಧರ್ಮ ಪ್ರಾಂತ್ಯದ ಬಿಷÀಪ್ ಡಾ| ಜೆರಾಲ್ಡ್ ಐಸಾಕ್ ಲೋಬೊ ಅವರಿಂದ ಆಶೀರ್ವಾದ ಪಡೆದರು.
ಈ ಸಂಧರ್ಭದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕಿ ರೋಷನಿ ಓಲಿವೆರಾ, ಎಐಸಿಸಿ ಸದಸ್ಯ ಅಮೃತ್ ಶಣೈ, ದ.ಕ.ಜಿಲ್ಲಾ ಇಂಟಕ್ ಉಪಾಧ್ಯಕ್ಷ ಸ್ಟೀವನ್ ಡಿ'ಸೋಜ ದೇರಡ್ಕ ಉಪಸ್ಥಿತರಿದ್ದರು.