Tuesday 16th, April 2024
canara news

ದಾಸ್ತಾನು ಮಾಡಿದ್ದ ಅಕ್ರಮ ಮರಳು ವಶ

Published On : 26 Apr 2018   |  Reported By : canaranews network


ಮಂಗಳೂರು : ಅಕ್ರಮವಾಗಿ ಖರೀದಿಸಿ, ದಾಸ್ತಾನು ಮಾಡಿದ್ದ ಮರಳನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ದ.ಕ.ಜಿಲ್ಲೆಯ ಬಿ.ಸಿ.ರೋಡಿನಲ್ಲಿ ನಡೆದಿದೆ. ಇಲ್ಲಿನ ನೇತ್ರಾವತಿ ಸೇತುವೆಯ ಬಳಿ ಖಾಸಗಿ ಕಂಪನಿಯು ಅಕ್ರಮವಾಗಿ ಸುಮಾರು 33 ಲಕ್ಷ ಮೌಲ್ಯದ ಮರಳು ಖರೀದಿಸಿ ದಾಸ್ತಾನು ಮಾಡಿದ ಬಗ್ಗೆ ಬಂಟ್ವಾಳ ಪೊಲೀಸರು ತನಿಖೆ ನಡೆಸಿ ವಶಪಡಿಸಿಕೊಂಡಿದ್ದಾರೆ. ಬಳಿಕ ಪ್ರಕರಣ ದಾಖಲಿಸುವಂತೆ ಸೂಚಿಸಿ ಭೂ ಮತ್ತು ಗಣಿ ಇಲಾಖೆಗೆ ಹಸ್ತಾಂತರ ಮಾಡಿದ್ದಾರೆ. ಸಕಲೇಶಪುರ- ಬಿಸಿರೋಡಿನ ವರೆಗೆ ನಡೆಯುವ ಚತುಷ್ಪಥ ಕಾಮಗಾರಿಯನ್ನು ನಡೆಸಲು ಗುತ್ತಿಗೆ ವಹಿಸಿಕೊಂಡಿರುವ ಎಲ್.ಎನ್.ಟಿ.ಕಂಪನಿಯು ಬಿಸಿರೋಡಿನ ಪಾಣೆಮಂಗಳೂರು ಖಾಸಗಿ ಜಾಗವನ್ನು ಬಾಡಿಗೆ ಪಡೆದ ಜಾಗದಲ್ಲಿ ಸುಮಾರು 2 ಸಾವಿರ ಲೋಡ್ ಮರಳನ್ನು ಅಕ್ರಮವಾಗಿ ಖರೀದಿಸಿ ಅಕ್ರಮವಾಗಿ ದಾಸ್ತಾನು ಮಾಡಿತ್ತು.

ಇದರಲ್ಲಿ 1100 ಲೋಡ್ ಮರಳು ಸ್ಥಳದಲ್ಲಿ ದಾಸ್ತಾನು ಇರಿಸಿದ್ದು ಉಳಿದ ಮರಳನ್ನು ಬಳಕೆ ಮಾಡಿದೆ . ಇನ್ನು ಮಂಗಳೂರು ಎಸ್.ಪಿ. ರವಿಕಾಂತೇ ಗೌಡ ಮಾರ್ಗದರ್ಶನ ದಲ್ಲಿ ಪ್ರೋಬೆಸನರಿ ಐಪಿಎಸ್ ಅಕ್ಷಯ್ ಎಮ್ ಕೆ, ಗ್ರಾಮಾಂತರ ಎಸ್.ಐ ಪ್ರಸನ್ನ, ನಗರ ಠಾಣಾ ಎಸ್.ಐ. ಚಂದ್ರಶೇಖರ್ , ಅಪರಾಧ ವಿಭಾಗದ ಎಸ್.ಐ. ಹರೀಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here