Wednesday 14th, May 2025
canara news

ಬೆಳ್ತಂಗಡಿ ಬಿಜೆಪಿಗೆ ಆಘಾತ, ಕಮಲ ಬಿಟ್ಟು 'ಕೈ' ಹಿಡಿದ ಗೌಡದ್ವಯರು

Published On : 03 May 2018   |  Reported By : canaranews network


ಮಂಗಳೂರು: ಕರಾವಳಿಯಲ್ಲಿ ಚುನಾವಣಾ ಪ್ರಚಾರ ಮುಗಿಲು ಮುಟ್ಟಿದೆ. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ಪರ ತಾರಾ ಪ್ರಚಾರಕರು ಅಬ್ಬರಿಸುತ್ತಿದ್ದಾರೆ. ಇದರ ನಡುವೆ ಬಿಜೆಪಿ ಹಾಗು ಕಾಂಗ್ರೆಸಿಗೆ ಭಿನ್ನಮತೀಯರ ಕಾಟ ತಲೆನೋವಾಗಿ ಪರಿಣಮಿಸಿದೆ.ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಭರ್ಜರಿಯಾಗಿ ನಡೆದಿದೆ. ಆದರೆ ಮಂಗಳೂರು ಉತ್ತರ ಕ್ಷೇತ್ರ, ಪುತ್ತೂರು ಮತ್ತು ಬೆಳ್ತಂಗಡಿಯ ಬಿಜೆಪಿಯಲ್ಲೇ 'ಬಿ' ಬಣ ಸೃಷ್ಟಿಯಾಗಿದ್ದು, ಪ್ರಚಾರ ಕಾರ್ಯಕ್ಕೆ ತೊಡಕಾಗಿದೆ.ಈ ಮಧ್ಯೆ, 2013 ರ ಚುನಾವಣೆಯಲ್ಲಿ ಬೆಳ್ತಂಗಡಿಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ರಂಜನ್ ಜಿ. ಗೌಡ ಮತ್ತು ಅವರ ತಂದೆ, ಮಾಜಿ ಸಚಿವ ಗಂಗಾಧರ ಗೌಡ ಬಿಜೆಪಿಯನ್ನು ತೊರೆಯಲು ನಿರ್ಧರಿಸಿದ್ದಾರೆ.

ರಂಜನ್ ಗೌಡ ಕಳೆದ 4 ವರ್ಷಗಳಿಂದ ಬೆಳ್ತಂಗಡಿ ಕ್ಷೇತ್ರದಾದ್ಯಂತ ಯುವಕರನ್ನು ಸಂಘಟಿಸಿ ಬಿಜೆಪಿ ಪರ ಪ್ರಚಾರ ನಡೆಸುತ್ತಿದ್ದರು. ಆದರೆ ಈ ಬಾರಿ ಅವರಿಗೆ ಟಿಕೆಟ್ ನೀಡದೆ ಯುವ ಮೋರ್ಚಾ ಮುಖಂಡ ನ್ಯಾಯವಾದಿ ಹರೀಶ್ ಪೂಂಜಾ ಅವರಿಗೆ ಪಕ್ಷ ಟಿಕೆಟ್ ನೀಡಿದೆ.ಪಕ್ಷದ ಈ ನಿರ್ಧಾರ ರಂಜನ್ ಗೌಡ ಪಾಲಿಗೆ ನುಂಗಲಾರದ ತುತ್ತಾಗಿತ್ತು. ಈ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ತಟಸ್ಥ ನೀತಿ ಅನುಸರಿಸುತ್ತಿದ್ದ ರಂಜನ್ ಗೌಡ ತಮ್ಮ ರಾಜಕೀಯ ಭವಿಷ್ಯವನ್ನು ಕಾಂಗ್ರೆಸ್ ನಲ್ಲಿ ಅರಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದೀಗ ಕ್ಷೇತ್ರದಲ್ಲಿ ಗೌಡದ್ವಯರ ಸೇರ್ಪಡೆಯಿಂದ ಕಾಂಗ್ರೆಸ್ ಅಭ್ಯರ್ಥಿ ವಸಂತ ಬಂಗೇರ ಅವರಿಗೆ ಮತ್ತಷ್ಟು ಬಲ ಬಂದಂತಾಗಿದೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here